ರಾಮನಗರ: ಕೆರೆಗೆ ಕಾರು ಉರುಳಿಬಿದ್ದು ಅದರೊಳಗಿದ್ದ ಎಲ್ಲ ನಾಲ್ವರು ಮೃತಪಟ್ಟ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ದೇವಮಾಚೋಹಳ್ಳಿ ಗ್ರಾಮದ ಬಳಿ ಭಾನುವಾರ ಸಂಜೆ ನಡೆದಿದೆ.
ಸುನಿಲ್, ಸಂತೋಷ್, ಮಂಜುನಾಥ್ ಹಾಗೂ ರಾಘವೇಂದ್ರ ಮೃತಪಟ್ಟವರು. ಬೆಂಗಳೂರಿನಿಂದ ಹುಲಿಯೂರು ದುರ್ಗಕ್ಕೆ ಬರುತ್ತಿರುವ ವೇಳೆ ಈ ದುರ್ಘಟನೆ ಸಂಭವಿಸಿದೆ. ವೇಗವಾಗಿ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕೆರೆಗೆ ಉರುಳಿಬಿದ್ದಿದೆ. ಒಳಗಿದ್ದವರು ಹೊರಬರಲಾಗದೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದರು.
ಮೃತದೇಹಗಳನ್ನು ನೆಲಮಂಗಲ ಹಾಗೂ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಲಾಗಿದೆ. ತಾವರೆಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.