ಕನಕಪುರ: ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವುದು ಇಲ್ಲಿನ ಅರಳಾಳು ಸಮೀಪದ ಸಂಗಮ ರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದಿದೆ.
ಚೀಲೂರು ಗ್ರಾಮದ ಬೋರೇಗೌಡರ ಮಗ ಕೇಶವಮೂರ್ತಿ (36) ಮೃತ ವ್ಯಕ್ತಿ. ಅವರಿಗೆ ಪತ್ನಿ ಮತ್ತು ಮಕ್ಕಳು ಇದ್ದಾರೆ. ಪತ್ನಿ ಮನೆಯಾದ ಕೋಡಿಹಳ್ಳಿ ಹೋಬಳಿ ದೊಡ್ಡಗುಳಿ ಗ್ರಾಮದಲ್ಲಿ ನೆಲೆಸಿದ್ದು ಕನಕಪುರ ಗ್ರಾಮಕ್ಕೆ ಕಾರಿನಲ್ಲಿ ಬಂದು ಹೋಗುವಾಗ ರಾತ್ರಿ ಸುಮಾರು 2 ಗಂಟೆ ಸಮಯದಲ್ಲಿ ಅಪಘಾತ ನಡೆದಿದೆ.
ಸೋಮವಾರ ಬೆಳಿಗ್ಗೆ ರಸ್ತೆಯಲ್ಲಿ ಹೋಗುವವರು ಅಪಘಾತವನ್ನು ಗಮನಿಸಿ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಸಬ್ ಇನ್ಸ್ಪೆಕ್ಟರ್ ವಿ.ಭಾಸ್ಕರ್ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ನೀಡಲಾಯಿತು. ಕಾರನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.