ADVERTISEMENT

ಬಿಡದಿ ಬಳಿ ಹೊತ್ತಿ ಉರಿದ ಕಾರು: ವಿಡಿಯೊ ನೋಡಿ

​ಪ್ರಜಾವಾಣಿ ವಾರ್ತೆ
Published 7 ಜೂನ್ 2020, 6:12 IST
Last Updated 7 ಜೂನ್ 2020, 6:12 IST

ರಾಮನಗರ: ತಾಲ್ಲೂಕಿನ ಬಿಡದಿ ಬಳಿ ಶನಿವಾರ ರಾತ್ರಿ  ಮಾರುತಿ ಕಾರೊಂದು ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿಯಿತು.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊರಟಿದ್ದ ಕಾರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತು. ಚಾಲಕ ಕೆಳಗಿಳಿದು ನೋಡುವಷ್ಟರಲ್ಲಿ ಬೆಂಕಿ ಕೆನ್ನಾಲಗೆ ವ್ಯಾಪಿಸಿತು. ಅಗ್ನಿಶಾಮಕ ದಳ ಬರುವ ಹೊತ್ತಿಗೆ ಕಾರು ಸುಟ್ಟು ಕರಕಲಾಗಿತ್ತು. ಅದೃಷ್ಟವಶಾತ್, ಘಟನೆಯಲ್ಲಿ ಯಾರಿಗೂ ತೊಂದರೆ ಆಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT