ಚನ್ನಪಟ್ಟಣ: ಉಪಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದಿಂದ ಜಯಭೇರಿ ಬಾರಿಸಿದ ಎಸ್.ಟಿ.ಸೋಮಶೇಖರ್ ಅವರ ಹುಟ್ಟೂರು ಮತ್ತೀಕೆರೆ ಶೆಟ್ಟಿಹಳ್ಳಿಯಲ್ಲಿ ಗ್ರಾಮಸ್ಥರು ಮಂಗಳವಾರ ಸಂಭ್ರಮಾಚರಣೆ ನಡೆಸಿದರು.
ಗ್ರಾಮದಲ್ಲಿ ಸೋಮಶೇಖರ್ ಅವರ ಭಾವಚಿತ್ರಕ್ಕೆ ಪುಷ್ಪಮಾಲೆ ಸಲ್ಲಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಯಿತು.
ಸೋಮಶೇಖರ್ ಅವರು ರಾಜಕೀಯದಲ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ. ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಲಿ. ಗ್ರಾಮದ ಕೀರ್ತಿ ಹೆಚ್ಚಿಸುವಂತಾಗಲಿ ಎಂದು ಶುಭ ಕೋರಿದರು.
ಲೋಕಾಯುಕ್ತನಿವೃತ್ತ ಅಧಿಕಾರಿ ಎಸ್.ಪಿ. ಪುಟುಸ್ವಾಮಿ, ವಕೀಲ ಎಂ.ವಿವೇಕ್, ಗ್ರಾಮದ ಮುಖಂಡರಾದ ಎಸ್.ಆರ್.ದಿಲೀಪ್, ರವಿರಾಜ್, ಸಂತೋಷ್, ಗಿರೀಶ್, ಚಲುವಪ್ರಸಾದ್, ಸೋಮ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.