ಚನ್ನಪಟ್ಟಣ: ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಮಾವಿನತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಹತ್ತಕ್ಕೂ ಹೆಚ್ಚು ಮಾವಿನಮರಗಳು ಸುಟ್ಟುಹೋಗಿವೆ.
ಗ್ರಾಮದ ರೈತ ಪಟೇಲ್ ಶಿವಣ್ಣ ಅವರ ಮಾವಿನತೋಟಕ್ಕೆ ಬೆಂಕಿ ಬಿದ್ದಿದ್ದು, ತೋಟದಲ್ಲಿ ಒಣಗಿದ ಎಲೆಗಳು, ಒಣಗಿದ ಹುಲ್ಲಿಗೆ ಬೆಂಕಿ ಹೊತ್ತುಕೊಂಡು ಬೆಂಕಿಯ ಕೆನ್ನಾಲಿಗೆ ತೀವ್ರವಾದ ಕಾರಣ ಮಾವಿನಮರಗಳು ಸುಟ್ಟುಹೋಗಿದ್ದು, ₹ 2 ಲಕ್ಷ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಕಿಡಿಗೇಡಿಗಳು ತೋಟಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಿ ಶಿವಣ್ಣ ಅಕ್ಕೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.