ಚನ್ನಪಟ್ಟಣ: ತಾಲ್ಲೂಕಿನ ನೇರಳೂರು ಗ್ರಾಮದಲ್ಲಿ ಭಾನುವಾರ ರಾತ್ರಿ ಚಿರತೆ ದಾಳಿ ನಡೆಸಿ ಕರುವನ್ನು ಕೊಂದು ಹಾಕಿದೆ.
ಗ್ರಾಮದ ಸಿದ್ದೇಗೌಡ ಅವರಿಗೆ ಸೇರಿದ ತೋಟದ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ವೇಳೆ ದಾಳಿ ನಡೆಸಿದೆ. ಇದರ ಬೆಲೆ ₹30 ಸಾವಿರ ಎಂದು ಅಂದಾಜಿಸಲಾಗಿದೆ.
ಈ ಭಾಗದಲ್ಲಿ ಎರಡು ದೊಡ್ಡ ಚಿರತೆ ಹಾಗೂ ಒಂದು ಮರಿಚಿರತೆ ಸೇರಿ ಒಟ್ಟು ಮೂರು ಚಿರತೆಗಳು ಓಡಾಡಿಕೊಂಡಿದ್ದು, ಗ್ರಾಮದ ಜನರಲ್ಲಿ ಭೀತಿ ಸೃಷ್ಟಿ ಆಗಿದೆ. ಈಗಾಗಲೇ ಗ್ರಾಮದಲ್ಲಿ ಮೂರರಿಂದ ನಾಲ್ಕು ಕುರಿಗಳನ್ನು ಬಲಿ ತೆಗೆದುಕೊಂಡಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಅರಣ್ಯ ಇಲಾಖೆ ಸಿಬ್ಬಂದಿ ಈ ಭಾಗದಲ್ಲಿ ಬೋನು ಇಟ್ಟು ಚಿರತೆಗಳನ್ನು ಸೆರೆ ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.