ADVERTISEMENT

ಚಿರತೆ ದಾಳಿ: ಕರು ಬಲಿ

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 9:15 IST
Last Updated 30 ಜೂನ್ 2020, 9:15 IST
ಚನ್ನಪಟ್ಟಣ ತಾಲ್ಲೂಕಿನ ನೇರಳೂರು ಗ್ರಾಮದಲ್ಲಿ ಚಿರತೆ ದಾಳಿಯಿಂದ ಸಾವಿಗೀಡಾಗಿರುವ ಕರು
ಚನ್ನಪಟ್ಟಣ ತಾಲ್ಲೂಕಿನ ನೇರಳೂರು ಗ್ರಾಮದಲ್ಲಿ ಚಿರತೆ ದಾಳಿಯಿಂದ ಸಾವಿಗೀಡಾಗಿರುವ ಕರು   

ಚನ್ನಪಟ್ಟಣ: ತಾಲ್ಲೂಕಿನ ನೇರಳೂರು ಗ್ರಾಮದಲ್ಲಿ ಭಾನುವಾರ ರಾತ್ರಿ ಚಿರತೆ ದಾಳಿ ನಡೆಸಿ ಕರುವನ್ನು ಕೊಂದು ಹಾಕಿದೆ.

ಗ್ರಾಮದ ಸಿದ್ದೇಗೌಡ ಅವರಿಗೆ ಸೇರಿದ ತೋಟದ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ವೇಳೆ ದಾಳಿ ನಡೆಸಿದೆ. ಇದರ ಬೆಲೆ ₹30 ಸಾವಿರ ಎಂದು ಅಂದಾಜಿಸಲಾಗಿದೆ.‌

ಈ ಭಾಗದಲ್ಲಿ ಎರಡು ದೊಡ್ಡ ಚಿರತೆ ಹಾಗೂ ಒಂದು ಮರಿಚಿರತೆ ಸೇರಿ ಒಟ್ಟು ಮೂರು ಚಿರತೆಗಳು ಓಡಾಡಿಕೊಂಡಿದ್ದು, ಗ್ರಾಮದ ಜನರಲ್ಲಿ ಭೀತಿ ಸೃಷ್ಟಿ ಆಗಿದೆ. ಈಗಾಗಲೇ ಗ್ರಾಮದಲ್ಲಿ ಮೂರರಿಂದ ನಾಲ್ಕು ಕುರಿಗಳನ್ನು ಬಲಿ ತೆಗೆದುಕೊಂಡಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ADVERTISEMENT

ಅರಣ್ಯ ಇಲಾಖೆ ಸಿಬ್ಬಂದಿ ಈ ಭಾಗದಲ್ಲಿ ಬೋನು ಇಟ್ಟು ಚಿರತೆಗಳನ್ನು ಸೆರೆ ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.