ADVERTISEMENT

ಸರ್ಕಾರಿ ಕಚೇರಿ ಆವರಣ ಸ್ವಚ್ಛತೆ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2019, 14:20 IST
Last Updated 27 ಡಿಸೆಂಬರ್ 2019, 14:20 IST
ಮಿನಿವಿಧಾನ ಸೌಧದ ಆವರಣವನ್ನು ಶುಕ್ರವಾರ ಸ್ವಚ್ಛಗೊಳಿಸಿದ ಅಧಿಕಾರಿಗಳು
ಮಿನಿವಿಧಾನ ಸೌಧದ ಆವರಣವನ್ನು ಶುಕ್ರವಾರ ಸ್ವಚ್ಛಗೊಳಿಸಿದ ಅಧಿಕಾರಿಗಳು   

ರಾಮನಗರ: ಸ್ವಚ್ಛ ಶುಕ್ರವಾರದ ಅಂಗವಾಗಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಇಕ್ರಂ ಅವರಿಂದ ಹಿಡಿದು, ಗ್ರಾಮ ಪಂಚಾಯಿತಿ ಕೆಳ ಹಂತದ ಸಿಬ್ಬಂದಿ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಒಂದು ಗಂಟೆ ಶ್ರಮದಾನ ಮಾಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಇಕ್ರಂ, ಉಪಕಾರ್ಯದರ್ಶಿ ಉಮೇಶ್ ಸೇರಿದಂತೆ ಶಿಕ್ಷಣ ಇಲಾಖೆ ಅಕಾರಿಗಳು ಹಾಗೂ ವಿವಿಧ ಇಲಾಖೆ ಸಹಾಯಕರು ತಮ್ಮ ಜಿಲ್ಲಾ ಪಂಚಾಯಿತಿ ಆವರಣದಲ್ಲಿನ ಸುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿದರು.

ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗಾಣಕಲ್ ನಟರಾಜ್ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ವಚ್ಛ ಶುಕ್ರವಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಉಪ ವಿಭಾಗಾಧಿಕಾರಿ ಡಾ. ದಾಕ್ಷಾಯಿಣಿ ಸ್ವಚ್ಛ ಕಾರ್ಯಕ್ಕೆ ಕೈ ಜೋಡಿಸಿದರು.

ADVERTISEMENT

ಶುಕ್ರವಾರ ಕಚೇರಿ ಆರಂಭಕ್ಕೂ ಮುನ್ನ ಸ್ವಚ್ಛತಾ ಕಾರ್ಯ ನಡೆಯಿತು. ಹೊಸ ವರ್ಷದ ಆರಂಭದಲ್ಲಿ 'ಪ್ಲಾಸ್ಟಿಕ್ ಮುಕ್ತ ನಮ್ಮ ಮನೆ' ಎಂಬ ಶೀರ್ಷಿಕೆಯಡಿ ಮೂರು ದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗಾಣಕಲ್ ನಟರಾಜ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.