ರಾಮನಗರ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇದೇ 17 ಮತ್ತು 18ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ 9 ಗಂಟೆಗೆ ಚನ್ನಪಟ್ಟಣ ತಾಲ್ಲೂಕಿನ ಇಗ್ಗಲೂರು ಗ್ರಾಮಕ್ಕೆ ಭೇಟಿ ನೀಡಿ, ಇಗ್ಗಲೂರು ಬ್ಯಾರೇಜ್ ಕಾಮಗಾರಿ ಪರಿಶೀಲನೆ ಹಾಗೂ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ಮಾಡಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಅಕ್ಕೂರು ಗ್ರಾಮದ ಸರ್ಕಾರಿ ಶಾಲೆ ಮೈದಾನದಲ್ಲಿ ಅಕ್ಕೂರು ಹೋಬಳಿ ಮಟ್ಟದ -ಜನತಾದರ್ಶನ ಮತ್ತು ಮನವಿ ಸ್ವೀಕರಿಸಿ, ಕುಂದುಕೊರತೆಗಳನ್ನು ಆಲಿಸಲಿದ್ದಾರೆ.
ಮಧ್ಯಾಹ್ನ 1.15ಕ್ಕೆ ಚನ್ನಪಟ್ಟಣದ ಕೋಡಂಬಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಕೋಡಂಬಳ್ಳಿ ಸರ್ಕಾರಿ ಶಾಲೆ ಮೈದಾನದಲ್ಲಿ ಕೋಡಂಬಳ್ಳಿ ಹೋಬಳಿ- ಜನತಾದರ್ಶನ ಮತ್ತು ಮನವಿ ಸ್ವೀಕರಿಸಲಿದ್ದಾರೆ. ಸಂಜೆ 4.25ಕ್ಕೆ ಹೊಂಗನೂರು ಗ್ರಾಮದಲ್ಲಿ ಜನತಾ ದರ್ಶನ ನಡೆಯಲಿದೆ.
ಇದೇ 18ರಂದು ಬೆಳಿಗ್ಗೆ 9.45ಕ್ಕೆ ಚನ್ನಪಟ್ಟಣ ತಾಲ್ಲೂಕಿನ ಬೇವೂರು ಗ್ರಾಮಕ್ಕೆ ಭೇಟಿ ನೀಡಿ, ಬೇವೂರು ಸರ್ಕಾರಿ ಶಾಲೆ ಮೈದಾನದಲ್ಲಿ ಬೇವೂರು ಹೋಬಳಿ- ಜನತಾದರ್ಶನ ನಡೆಯಲಿದ್ದಾರೆ. ಮಧ್ಯಾಹ್ನ 2.50ಕ್ಕೆ ಬೈರಾಪಟ್ಟಣ ಗ್ರಾಮದ ಸರ್ಕಾರಿ ಶಾಲೆ ಮೈದಾನದಲ್ಲಿ ಹಾಗೂ ಸಂಜೆ 4 ಗಂಟೆಗೆ ಚನ್ನಪಟ್ಟಣದ ಸರ್ಕಾರಿ ಶಾಲೆ ಮೈದಾನದಲ್ಲಿ ಕಸಬಾ ಹೋಬಳಿ- ಜನತಾದರ್ಶನ ಕಾರ್ಯಕ್ರಮ ನಡೆಯಲಿದೆ ಎಂದು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.