ADVERTISEMENT

ಕುದೂರು: ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಕಾಲೇಜು ಬಸ್

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2025, 2:34 IST
Last Updated 29 ಅಕ್ಟೋಬರ್ 2025, 2:34 IST
ಮಾಗಡಿ ತಾಲ್ಲೂಕಿನ ಬಿಸ್ಕೂರು ಏರಿ ಬಳಿ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿರುವ ಕಾಲೇಜು ಬಸ್
ಮಾಗಡಿ ತಾಲ್ಲೂಕಿನ ಬಿಸ್ಕೂರು ಏರಿ ಬಳಿ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿರುವ ಕಾಲೇಜು ಬಸ್   

ಕುದೂರು: ಮುಂದೆ ಬರುತ್ತಿದ್ದ ವಾಹನಕ್ಕೆ ಜಾಗ ಕೊಡಲು ಹೋಗಿ ಕೆರೆ ಏರಿ ಹಳ್ಳಕ್ಕೆ ಕಾಲೇಜು  ಬಸ್‌ಯೊಂದು ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. 

ತಾಲ್ಲೂಕಿನ ಕುದೂರು ಹೋಬಳಿ ಬಿಸ್ಕೂರು ಸಮೀಪ ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದ್ದು,ಬಸ್ ಖಾಲಿ ಇದ್ದ ಹಿನ್ನೆಲೆಯಲ್ಲಿ ಅನಾಹುತ ತಪ್ಪಿದೆ.

ನೆಲಮಂಗಲದ ದಾಬಸ್ ಪೇಟೆ ಹೊಯ್ಸಳ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಕರೆತರಲು ಹೋಗುತ್ತಿದ್ದಾಗ ಈ ಅವಘಡ ನಡೆದಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.