ADVERTISEMENT

ಕಾಂಗ್ರೆಸ್‌ ಶಾಸಕರ ರೆಸಾರ್ಟ್‌ ವಾಸ್ತವ್ಯ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 20 ಜನವರಿ 2019, 15:39 IST
Last Updated 20 ಜನವರಿ 2019, 15:39 IST
ಈಗಲ್‌ಟನ್‌ ರೆಸಾರ್ಟ್‌
ಈಗಲ್‌ಟನ್‌ ರೆಸಾರ್ಟ್‌   

ರಾಮನಗರ: ಕಾಂಗ್ರೆಸ್‌ ಶಾಸಕರ ರೆಸಾರ್ಟ್‌ ವಾಸ್ತವ್ಯ ಮುಂದುವರಿದಿದ್ದು, ಸೋಮವಾರವೂ ಶಾಸಕರು ಈಗಲ್‌ಟನ್‌ನಲ್ಲಿಯೇ ಇರಲಿದ್ದಾರೆ.

ಭಾನುವಾರ ಸಂಜೆ. 7.15ಕ್ಕೆ ರೆಸಾರ್ಟಿನಲ್ಲಿ ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಯಿತು. ಸೋಮವಾರ ಬೆಳಿಗ್ಗೆ 11ಕ್ಕೆ ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ನಂತರದಲ್ಲಿ ಮುಂದಿನ ನಡೆ ಕುರಿತು ಚರ್ಚಿಸುವುದಾಗಿ ಕಾಂಗ್ರೆಸ್‌ ನಾಯಕರು ತಿಳಿಸಿದರು.

ವೇಣುಗೋಪಾಲ್ ಸುಮಾರು ಮೂರು ಗಂಟೆ ಕಾಲ ಶಾಸಕರೊಂದಿಗೆ ಚರ್ಚೆ ನಡೆಸಿದ್ದು, ಒಬ್ಬೊಬ್ಬರಾಗಿ ಮಾತುಕತೆ ನಡೆಸಿದರು, ಶಾಸಕರ ಹೊಡೆದಾಟದ ವಿಷಯವೂ ಪ್ರಮುಖವಾಗಿ ಚರ್ಚೆಯಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.