ರಾಮನಗರ: ಜಿಲ್ಲೆಯಲ್ಲಿ ಬುಧವಾರ 29 ಮಂದಿಯಲ್ಲಿ ಕೋವಿಡ್ ಸೋಂಕು ದೃಢವಾಗಿದೆ.
ಚನ್ನಪಟ್ಟಣ 5, ಕನಕಪುರ 8, ಮಾಗಡಿ 4 ಮತ್ತು ರಾಮನಗರ 12 ಪ್ರಕರಣಗಳು ಇದರಲ್ಲಿ ಸೇರಿವೆ. ಇದುವರೆಗೆ ಜಿಲ್ಲೆಯಲ್ಲಿ 5572 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 1342, ಕನಕಪುರ 1158, ಮಾಗಡಿ 869 ಮತ್ತು ರಾಮನಗರ 2203 ಪ್ರಕರಣಗಳು ವರದಿಯಾಗಿವೆ. ಸೋಂಕಿನಿಂದಾಗಿ ಜಿಲ್ಲೆಯಲ್ಲಿ ಒಟ್ಟು 55 ಮಂದಿ ನಿಧನರಾಗಿದ್ದಾರೆ.
ಗುಣಮುಖ: ಚನ್ನಪಟ್ಟಣ ತಾಲ್ಲೂಕಿನಲ್ಲಿ 10, ಕನಕಪುರ ತಾಲ್ಲೂಕಿನಲ್ಲಿ 29, ಮಾಗಡಿ ತಾಲ್ಲೂಕಿನಲ್ಲಿ 13 ಹಾಗೂ ರಾಮನಗರ ತಾಲ್ಲೂಕಿನಲ್ಲಿ 21 ಸೇರಿ ಒಟ್ಟಾರೆ 73 ಜನರು ಬುಧವಾರ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 4729 ಜನರು ಗುಣಮುಖರಾಗಿದ್ದಾರೆ. ಇನ್ನೂ 788 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.