ADVERTISEMENT

ಮಗಳ ಮದುವೆ: ಕ್ಷೇತ್ರದ ಜನರಿಗೆ ಸೀರೆ, ಬಟ್ಟೆ ಉಡುಗೊರೆ‌

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2021, 0:57 IST
Last Updated 15 ಫೆಬ್ರುವರಿ 2021, 0:57 IST
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಮ್ಮ ಮಗಳ ಮದುವೆಯ ಹಿನ್ನೆಲೆಯಲ್ಲಿ ಕನಕಪುರ ವಿಧಾನಸಭಾ ಕ್ಷೇತ್ರದ ಜನರಿಗೆ ನೀಡಿರುವ ಗಿಫ್ಟ್‌
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಮ್ಮ ಮಗಳ ಮದುವೆಯ ಹಿನ್ನೆಲೆಯಲ್ಲಿ ಕನಕಪುರ ವಿಧಾನಸಭಾ ಕ್ಷೇತ್ರದ ಜನರಿಗೆ ನೀಡಿರುವ ಗಿಫ್ಟ್‌   

ಕನಕಪುರ:ಕ್ಷೇತ್ರದ ಜನರಿಗೆ ಬಟ್ಟೆ ಮತ್ತು ಸೀರೆ ಉಡುಗೊರೆ ನೀಡುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಗಳ ಮದುವೆ ಸಂಭ್ರಮವನ್ನು ಹಂಚಿಕೊಂಡಿದ್ದಾರೆ.

ಕ್ಷೇತ್ರದ ಜನರ ಸಮ್ಮುಖದಲ್ಲಿ ಸಂಭ್ರಮದಿಂದ ಮಗಳ ಮದುವೆ ಮಾಡಬೇಕು ಎಂದು ಕನಸು ಕಂಡಿದ್ದ ಶಿವಕುಮಾರ್‌ ಅವರುಕೊರೊನಾ ಕಾರಣದಿಂದಾಗಿ ಕ್ಷೇತ್ರದ ಜನರನ್ನು ವಿವಾಹಕ್ಕೆ ಆಹ್ವಾನಿಸಲು ಸಾಧ್ಯವಾಗಿರಲಿಲ್ಲ.

ಹಾಗಾಗಿ ತಮ್ಮ ಇಚ್ಛೆಯಂತೆ ಕ್ಷೇತ್ರದ ಪ್ರತಿಯೊಂದು ಮನೆಗೂ ಸೀರೆ ಮತ್ತು ಬಟ್ಟೆ ಉಡುಗೊರೆ ತಲುಪಿಸುವ ವ್ಯವಸ್ಥೆ ಮಾಡಿದ್ದಾರೆ. ಪಕ್ಷದ ಕಾರ್ಯಕರ್ತರು, ಮುಖಂಡರು ಮತ್ತು ಜನರ ಮನೆಗೆ ಸೀರೆ ಮತ್ತು ಬಟ್ಟೆಯ ಜತೆಗೆ ಒಂದು ಸ್ವೀಟ್‌ ಬಾಕ್ಸ್‌ ಕಾಣಿಕೆಯಾಗಿ ಕೊಟ್ಟಿದ್ದಾರೆ.

ADVERTISEMENT

ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ ಮೊಮ್ಮಗ ಹಾಗೂ ಕಾಫಿ ಡೇ ಮಾಲೀಕ ದಿವಂಗತ ಸಿದ್ಧಾರ್ಥ ಅವರ ಪುತ್ರ ಅಮಾರ್ತ್ಯ ಅವರೊಂದಿಗೆ ಭಾನುವಾರ ಡಿ.ಕೆ. ಶಿವಕುಮಾರ್ ಅವರ ಪುತ್ರಿಯ ವಿವಾಹ ನೆರವೇರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.