ಕನಕಪುರ: ಮನೆಯಿಂದ ಹೊರ ಹೋಗಿದ್ದ ಯುವಕನೊಬ್ಬ ಶವವಾಗಿ ಅರ್ಕಾವತಿ ನದಿಯಲ್ಲಿ ಪತ್ತೆಯಾಗಿದ್ದಾನೆ. ಮೃತ ಯುವಕ ನಗರದ ಹನುಮಂತನಗರದ ರಾಘವೇಂದ್ರ ಅವರ ಪುತ್ರ ಅಭಿಲಾಷ್ (19) ಎಂದು ಗುರುತಿಸಲಾಗಿದೆ.
ಜುಲೈ 6ರಂದು ಅರ್ಕಾವತಿ ನದಿಯಲ್ಲಿ ಯುವಕನ ಬಟ್ಟೆ ಸಿಕ್ಕಿತ್ತು. ಇದರಿಂದ ಗಾಬರಿಗೊಂಡ ಪೋಷಕರು ನದಿ ತೀರದಲ್ಲಿ ಹುಡುಕಾಟ ನಡೆಸುತ್ತಿದ್ದಾಗ ಬೆಂಗಳೂರು ರಸ್ತೆಯ ಅರ್ಕಾವತಿ ಸೇತುವೆ ಕೆಳಗಡೆ ಮೃತದೇಹ ಪತ್ತೆಯಾಗಿದೆ.
ನದಿಯಲ್ಲಿ ಈಜಲು ಹೋಗಿ ಮೃತಪಟ್ಟಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.