ಕನಕಪುರ: ಟ್ರಾಕ್ಟರ್ ಅಪಘಾತದಲ್ಲಿ ದುರ್ಮರಣಕ್ಕೆ ಈಡಾಗಿದ್ದ ಐವರು ಮಹಿಳೆಯರ ಅಂತ್ಯ ಸಂಸ್ಕಾರವನ್ನು ಕೆರಳಾಳುಸಂದ್ರ ಗ್ರಾಮದಲ್ಲಿ ಗ್ರಾಮಸ್ಥರು ಮಂಗಳವಾರ ಸಾಮೂಹಿಕವಾಗಿ ನೆರವೇರಿಸಲಾಯಿತು.
ದಬ್ಬಗುಳೇಶ್ವರ ದೇವರ ದರ್ಶನಕ್ಕೆ ತೆರೆಳಿದ್ದ ಕೆರಳಾಳುಸಂದ್ರ ಗ್ರಾಮದ ಮಂಗಳಮ್ಮ (24), ಗೌರಮ್ಮ (60), ಪುಟ್ಟನಿಂಗಮ್ಮ (60), ಹೊಸಬಮ್ಮ (75), ಈರಮ್ಮ (85) ಅಪಘಾತದಲ್ಲಿ ಮೃತಪಟ್ಟಿದ್ದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡು ಮೃತರಿಗೆ ಅಂತಿಮ ನಮನ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಎಸ್.ರವಿ, ಬಿಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ನಾರಾಯಣಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಕೃಷ್ಣಮೂರ್ತಿ, ಜಿಲ್ಲಾ ಪಂಚಾಯಿತಿ ಸದಸ್ಯ ಭಾಗ್ಯಶಾಂತಕುಮಾರ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.