ADVERTISEMENT

ಆರೋಪಿಗಳ ಗಡಿಪಾರಿಗೆ ಆಗ್ರಹ

ಹಿಂದೂ, ಮುಸ್ಲಿಂ ಧರ್ಮದ ಪ್ರೇಮಿಗಳೊಂದಿಗೆ ಅಮಾನುಷ ವರ್ತನೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2025, 5:06 IST
Last Updated 25 ಸೆಪ್ಟೆಂಬರ್ 2025, 5:06 IST
ಕನಕಪುರದ ಶ್ರೀರಾಮ ಸೇನೆ ಪದಾಧಿಕಾರಿಗಳು ಹಿಂದೂ–ಮುಸ್ಲಿಂ ಪ್ರೇಮಿಗಳೊಂದಿಗೆ ಅಮಾನುಷವಾಗಿ ವರ್ತಿಸಿರುವ ಆರೋಪಿಗಳ ಗಡಿಪಾರಿಗೆ ಒತ್ತಾಯಿಸಿ ಪುರ ಪೊಲೀಸರಿಗೆ ಮನವಿಪತ್ರ ಸಲ್ಲಿಸಿದರು
ಕನಕಪುರದ ಶ್ರೀರಾಮ ಸೇನೆ ಪದಾಧಿಕಾರಿಗಳು ಹಿಂದೂ–ಮುಸ್ಲಿಂ ಪ್ರೇಮಿಗಳೊಂದಿಗೆ ಅಮಾನುಷವಾಗಿ ವರ್ತಿಸಿರುವ ಆರೋಪಿಗಳ ಗಡಿಪಾರಿಗೆ ಒತ್ತಾಯಿಸಿ ಪುರ ಪೊಲೀಸರಿಗೆ ಮನವಿಪತ್ರ ಸಲ್ಲಿಸಿದರು   

ಕನಕಪುರ: ನಗರದ ಇಂದಿರಾನಗರದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮಕ್ಕೆ ಸೇರಿದ ಪ್ರೇಮಿಗಳಿಬ್ಬರ ಮೇಲೆ ಹಲ್ಲೆ ನಡೆಸಿ, ತಲೆಯನ್ನು ಅರ್ಧ ಬೋಳಿಸಿ ಅಮಾನುಷವಾಗಿ ವರ್ತಿಸಿರುವವರ ವಿರುದ್ಧ ಗೂಂಡಾಗಿರಿ ಕಾಯ್ದೆ ದಾಖಲಿಸಿ ಗಡಿಪಾರು ಮಾಡುವಂತೆ ಒತ್ತಾಯಿಸಿ ಶ್ರೀರಾಮ ಸೇನೆ ಪದಾಧಿಕಾರಿಗಳು ಮಂಗಳವಾರ ಪುರ ಪೊಲೀಸರಿಗೆ ದೂರು ಸಲ್ಲಿಸಿದರು.

ಈ ವೇಳೆ ಶ್ರೀರಾಮ ಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗಾರ್ಜುನಗೌಡ ಮಾತನಾಡಿ, ಇಬ್ಬರು ಪ್ರೇಮಿಗಳ ನಡುವೆ ಗುಂಪೊಂದು ನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿ ಅಮಾನುಷವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದರು.

ಹಲ್ಲೆಗೊಳಗಾಗಿರುವ ಮಹೇಶ್ ತಾಯಿ ಮೇಲೆಯೂ ಮುಸ್ಲಿಂ ಮಹಿಳೆಯರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಆದರೆ, ಈವೆರೆಗೂ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿಲ್ಲ ಎಂದು ದೂರಿದರು.

ADVERTISEMENT

ವಿಭಾಗೀಯ ಅಧ್ಯಕ್ಷ ರಾಜೇಶ್, ಜಿಲ್ಲಾಧ್ಯಕ್ಷ ಪರಮೇಶ್, ಪದಾಧಿಕಾರಿಗಳಾದ ಕುಮಾರ್, ಚೀರಣಕುಪ್ಪೆ ನವೀನ್, ಸಾಗರ್, ಸ್ವಾಮಿ, ಪ್ರಭು ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.