ಮರಳವಾಡಿ (ಕನಕಪುರ): ತಾಲ್ಲೂಕಿನ ಮರಳವಾಡಿ ಹೋಬಳಿ ವ್ಯಾಪ್ತಿಯ ಪಡುವಣಗೆರೆ ಹಾಗೂ ಟಿ.ಹೊಸಳ್ಳಿ ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಬೆಂಗಳೂರು ರಸ್ತೆಯ ಹಾರೋಹಳ್ಳಿ ಮಂಜುನಾಥ ಕಲ್ಯಾಣ ಮಂಟಪದ ರಸ್ತೆಯಿಂದ ಪಡುವಣಗೆರೆವರೆಗೆ ಮತ್ತು ಪಡುವಣಗೆರೆ ಅಡ್ಡರಸ್ತೆಯಿಂದ ಪಡುವಣಗೆರೆ ಮುರಡಿ ಬಸವೇಶ್ವರ ದೇವಸ್ಥಾನದವರೆಗೆ ಸುಮಾರು ₹ 7 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಪಡಿಸಲು ಟೆಂಡರ್ ನೀಡಲಾಗಿದೆ.
ಒಂದೂವರೆ ತಿಂಗಳ ಹಿಂದೆ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಹಾರೋಹಳ್ಳಿ ಮತ್ತು ಮರಳವಾಡಿ ಹೋಬಳಿಗಳಿಗೆ ಬಂದು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದರು.
ಗುತ್ತಿಗೆದಾರರು ಶೀಘ್ರವೇ ಕೆಲಸ ಪ್ರಾರಂಭಿಸುವುದಾಗಿ ಹೇಳಿ ಮೊದಲು ಇದ್ದಂತ ಡಾಂಬರ್ ರಸ್ತೆಯನ್ನು ಜೆಸಿಬಿಯಿಂದ ಅಗೆದು ರಸ್ತೆಗಳಿಗೆ ಜಲ್ಲಿ ಹಾಸಿ ಹೋದವರು ಒಂದೂವರೆ ತಿಂಗಳಾದರೂ ಈ ಕಡೆ ಬಂದಿಲ್ಲವೆಂದು. ಈಗ ಬಸ್ ಸಂಚಾರವೂ ಸ್ಥಗಿತಗೊಂಡಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.