ಕುದೂರು: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕಾಗಿಮಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆಶ್ರಯದಲ್ಲಿ ಕಾಗಿಮಡು ಗ್ರಾಮದಲ್ಲಿ ಡೆಂಗಿ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.
ಮುಖ್ಯ ಶಿಕ್ಷಕಿ ಬಿ.ಎನ್ ಯಶೋದಾ ಮಾತನಾಡಿ, ಡೆಂಗಿ ಜ್ವರ ಸೊಳ್ಳೆಯಿಂದ ವ್ಯಕ್ತಿಗೆ ಹರಡುವ ಸಾಂಕ್ರಾಮಿಕ ರೋಗವಾಗಿದೆ. ಇವು ಕಚ್ಚುವುದರಿಂದ ಡೆಂಗಿ ಜ್ವರ ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಎಲ್ಲೆಡೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ಗ್ರಾಮದ ಮುಖ್ಯಬೀದಿಗಳಲ್ಲಿ ಡೆಂಗಿ ಜ್ವರದ ಜಾಗೃತಿ ಕಾರ್ಯಕ್ರಮ ನಡೆಯಿತು.
ರೇಖಾ, ಆಶಾ ಕಾರ್ಯಕರ್ತೆ ಗಂಗಮ್ಮ, ಶಿಕ್ಷಕರಾದ ವೆಂಕಟೇಶ್, ಆಂಜಿನಪ್ಪ, ವಸಂತ, ರವೀಶ್, ಕುಮಾರ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.