ರಾಮನಗರ: ಹೈದರಾಬಾದ್ ನಲ್ಲಿ ಈಚೆಗೆ ಅತ್ಯಾಚಾರ, ಹತ್ಯೆಗೆ ಒಳಗಾದ ಪಶುವೈದ್ಯೆ ಮತ್ತು ರೆಡ್ಡಿ ಸಮುದಾಯದ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಚನ್ನಪಟ್ಟಣದ ಪರಿಸರವಾದಿ ಭೂಹಳ್ಳಿ ಪುಟ್ಟಸ್ವಾಮಿ ವಿರುದ್ಧ ರಾಮನಗರ ಜಿಲ್ಲಾ ರೆಡ್ಡಿ ಸಮುದಾಯವು ಮಂಗಳವಾರ ಎಸ್ಪಿಗೆ ದೂರು ನೀಡಿತು.
ಪುಟ್ಟಸ್ವಾಮಿ ಅವರು ತಮ್ಮ ಫೇಸ್ ಬುಕ್ ಬರಹದಲ್ಲಿ ಅತ್ಯಾಚಾರಕ್ಕೆ ಒಳಗಾದ ಮಹಿಳೆ ಹಾಗೂ ರೆಡ್ಡಿ ಸಮುದಾಯದ ಗೌರವಕ್ಕೆ ಕುಂದು ಉಂಟು ಮಾಡುವಂತೆ ಬರೆದಿದ್ದಾರೆ. ಅಲ್ಲದೆ ಮಹಿಳೆಯರ ಬಗ್ಗೆಯೂ ಮುಜುಗರ ತರುವಂತಹ ಹೇಳಿಕೆಗಳನ್ನು ಪ್ರಕಟಿಸಿದ್ದಾರೆ. ಇದು ಜಾತಿಗಳ ನಡುವೆ ವೈಷಮ್ಯ ಹುಟ್ಟಿಸುವಂತೆ ಇದೆ. ಇದರಿಂದ ಇಡೀ ರೆಡ್ಡಿ ಸಮುದಾಯದ ಜನರ ಭಾವನೆಗಳಿಗೆ ನೋವುಂಟಾಗಿದೆ. ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಮುದಾಯದ ಜನರು ಮನವಿ ಮಾಡಿದರು.
ಸಂದೀಪ್, ಚಂದ್ರಶೇಖರ ರೆಡ್ಡಿ, ಸುರೇಶ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.