ADVERTISEMENT

ಕೇಂದ್ರ ಸಚಿವ ಜೈಶಂಕರ್‌ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ನಾಡಗೀತೆಗೆ ಅಗೌರವ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2022, 8:22 IST
Last Updated 13 ಆಗಸ್ಟ್ 2022, 8:22 IST
ಹಾರೋಹಳ್ಳಿಯಲ್ಲಿ ನಡೆದ ಹರ್ ಘರ್ ತಿರಂಗಾ ಯಾತ್ರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ಜೈಶಂಕರ್‌
ಹಾರೋಹಳ್ಳಿಯಲ್ಲಿ ನಡೆದ ಹರ್ ಘರ್ ತಿರಂಗಾ ಯಾತ್ರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ಜೈಶಂಕರ್‌   

ರಾಮನಗರ: ಕನಕಪುರ ತಾಲ್ಲೂಕಿನ ಹಾರೋಹಳ್ಳಿಯಲ್ಲಿ ಶನಿವಾರ ನಡೆದ ಹರ್ ಘರ್ ತಿರಂಗಾ ಯಾತ್ರೆ ವೇಳೆ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ನಾಡಗೀತೆಗೆ ಅಗೌರವ ತೋರಿದ ಘಟನೆ ನಡೆಯಿತು.

ವಿದ್ಯಾರ್ಥಿಗಳು ನಾಡಗೀತೆ ಹಾಡುವ ವೇಳೆ ವೇದಿಕೆಯಲ್ಲಿದ್ದ ಸಚಿವರು ಬಿಜೆಪಿ ಮುಖಂಡರ ಜೊತೆ ಮಾತುಕತೆಯಲ್ಲಿ ನಿರತರಾಗಿದ್ದರು.

ಕೇಂದ್ರ ಸಚಿವರ ಜೊತೆ ವಿಧಾನ ಪರಿಷತ್ ಸದಸ್ಯ ಅ. ದೇವೇಗೌಡ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಗೌಡ, ರೇಷ್ಮೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೌತಮ್ ಗೌಡ ಇದ್ದರು.

ADVERTISEMENT

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರ ಪೈಕಿ ನಾಡಗೀತೆ ಗಾಯನದ ವೇಳೆ ಹೆಚ್ಚಿನವರು ವೇದಿಕೆಯತ್ತ ಕೈಬೀಸುತ್ತಿರುವುದು, ಫೋಟೊ-ವಿಡಿಯೊಗಳನ್ನು ತೆಗೆಯುತ್ತಿರುವುದು, ಪರಸ್ಪರ ಮಾತನಾಡುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.