ADVERTISEMENT

ಪರಿಹಾರ ಚೆಕ್ ವಿತರಣೆ

​ಪ್ರಜಾವಾಣಿ ವಾರ್ತೆ
Published 13 ಜೂನ್ 2021, 4:52 IST
Last Updated 13 ಜೂನ್ 2021, 4:52 IST
ಕೋಡಿಹಳ್ಳಿಯ ಪೆಟ್ರೋಲ್‌ ಬಂಕ್‌ ಮುಂಭಾಗ ಕಾಂಗ್ರೆಸ್‌ ಕಾರ್ಯಕರ್ತರು ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು
ಕೋಡಿಹಳ್ಳಿಯ ಪೆಟ್ರೋಲ್‌ ಬಂಕ್‌ ಮುಂಭಾಗ ಕಾಂಗ್ರೆಸ್‌ ಕಾರ್ಯಕರ್ತರು ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು   

ರಾಮನಗರ: ನಗರದಲ್ಲಿ ಈಚೆಗೆ ಮ್ಯಾನ್‌ಹೋಲ್‌ನಲ್ಲಿ ಬಿದ್ದು ಮೃತಪಟ್ಟ ರಮೇಶ್ ಎಂಬ ವ್ಯಕ್ತಿಯ ಕುಟುಂಬದವರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ₹ 10 ಲಕ್ಷದ ಚೆಕ್‌ ವಿತರಿಸಿದರು.

ರಮೇಶ್ ಅವರ ಪತ್ನಿಗೆ ₹ 2.5 ಲಕ್ಷ, ತಾಯಿಗೆ ₹ 2.5 ಲಕ್ಷ ಹಾಗೂ ಅವರ ಮಗಳ ಹೆಸರಿನಲ್ಲಿ ₹ 5 ಲಕ್ಷ ನಿಶ್ಚಿತ ಠೇವಣಿ ಮಾಡಲಾಗಿದೆ. ಮಗಳು ಪ್ರಾಪ್ತ ವಯಸ್ಸಿಗೆ ಬಂದ ಮೇಲೆ ಹಣ ಪಡೆಯಬಹುದಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ
ರಾಮನಗರ ನಗರಸಭೆ ಪೌರಾಯುಕ್ತ ನಂದಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಲಲಿತಾ
ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.