ಕನಕಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುಟುಂಬ ಸಮೇತರಾಗಿ ಮನೆ ದೇವರು ಕೆಂಕೇರಮ್ಮ ಮತ್ತು ತಾಲ್ಲೂಕಿನ ಶಕ್ತಿದೇವತೆ ಕಬ್ಬಾಳಮ್ಮ ದೇವಾಲಯದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿದರು.
ದೇವಿಗೆ ಮಡಿ ತುಂಬಿಸುವ ಧಾರ್ಮಿಕ ಕಾರ್ಯ ನೆರವೇರಿಸಿದರು. ದೀಪಾವಳಿ ಹಬ್ಬವನ್ನು ಶಾಂತಿ ಮತ್ತು ಸಂಭ್ರಮದಿಂದ ಆಚರಣೆ ಮಾಡುವಂತೆ ಮನವಿ ಮಾಡಿದರು.
ಉಷಾ ಶಿವಕುಮಾರ್, ತಾಲ್ಲೂಕು ಪಂಚಾಯಿತಿ ಸದಸ್ಯ ಧನಂಜಯ್ಯ ಸೇರಿದಂತೆ ಸ್ಥಳೀಯ ಮುಖಂಡರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.