ರಾಮನಗರ: ‘ನನ್ನ ಬಲಿದಾನ ಮಾಡುತ್ತೇನೆ ಎನ್ನುವವರು ಮೊದಲು ಅವರ ಬಲಿದಾನಕ್ಕೂ ಸಿದ್ಧರಿರಬೇಕು' ಎಂದು ಸಂಸದ ಡಿ.ಕೆ. ಸುರೇಶ್ ಅವರು ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ತಿರುಗೇಟು ನೀಡಿದರು.
ಶನಿವಾರ ಪತ್ರಕರ್ತರ ಜತೆ ಮಾತನಾಡಿ, ‘ಅವರದ್ದು ಒಂದು ರಾಜಕೀಯ ಪಕ್ಷ. ಆ ಪಕ್ಷದ ಹಿನ್ನೆಲೆ ಗಾಯಕ ಅವರು. ಯಾರೂ ನನ್ನನ್ನು ಏನೂ ಮಾಡೋಕೆ ಆಗೋದಿಲ್ಲ. ನನ್ನ ಬಲಿದಾನ ಮಾಡ್ತಾನಂತಾ?ಅವನಿಗೆ ತಾಕತ್ ಇದ್ರೆ ಬರೋಕೆ ಹೇಳ್ರಿ’ ಎಂದು ಸವಾಲು ಹಾಕಿದರು.
‘ದೇಶದಲ್ಲಿ ಎಲ್ಲರಿಗೂ ಬದುಕುವ ಸಮಾನ ಹಕ್ಕನ್ನು ಸಂವಿಧಾನ ನೀಡಿದೆ. ಎಲ್ಲ ಜಾತಿ- ಧರ್ಮದವರೂ ಇಲ್ಲಿದ್ದಾರೆ. ಇದು ಯಾರೋ ಒಬ್ಬರ ಸ್ವತ್ತಲ್ಲ’ ಎಂದು ಕಿಡಿಕಾರಿದರು.
‘ಬಿಜೆಪಿಯವರು ರಾಮನಗರದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ. ಸಮ್ಮಿಶ್ರ ಸರ್ಕಾರ ಬಾಲಗಂಗಾಧರನಾಥ ಶ್ರೀಗಳ ಹುಟ್ಟೂರು ಬಾನಂದೂರು ಅಭಿವೃದ್ದಿಗೆಂದು ₹25 ಕೋಟಿ ಬಿಡುಗಡೆ ಮಾಡಿತ್ತು. ಹೊಸ ಸರ್ಕಾರದಲ್ಲಿ ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಸಭೆ ಕರೆಯಬೇಕು’ ಎಂದು ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.