ADVERTISEMENT

‘ಧಾರ್ಮಿಕ ಭಾವನೆಗೆ ಧಕ್ಕೆ ಸಲ್ಲ’

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2019, 14:08 IST
Last Updated 10 ಆಗಸ್ಟ್ 2019, 14:08 IST
ಚನ್ನಪಟ್ಟಣದ ಪುರ ಪೊಲೀಸ್ ಠಾಣೆಯಲ್ಲಿ ನಡೆದ ಬಕ್ರೀದ್ ಶಾಂತಿ ಸಭೆಯಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಗೋವಿಂದರಾಜು ಮಾತನಾಡಿದರು
ಚನ್ನಪಟ್ಟಣದ ಪುರ ಪೊಲೀಸ್ ಠಾಣೆಯಲ್ಲಿ ನಡೆದ ಬಕ್ರೀದ್ ಶಾಂತಿ ಸಭೆಯಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಗೋವಿಂದರಾಜು ಮಾತನಾಡಿದರು   

ಚನ್ನಪಟ್ಟಣ: ‘ಯಾವುದೇ ಸಮುದಾಯದ ಧಾರ್ಮಿಕ ಭಾವನೆಗಳಿಗೆ, ಯಾರಿಂದಲೂ ಧಕ್ಕೆಯುಂಟಾಗಬಾರದು’ ಎಂದು ಪುರ ಪೊಲೀಸ್ ಠಾಣೆಯ ಸರ್ಕಲ್ ಇನ್‌ಸ್ಪೆಕ್ಟರ್ ಗೋವಿಂದರಾಜು ಅಭಿಪ್ರಾಯಪಟ್ಟರು.

ಇಲ್ಲಿನ ಪುರ ಪೊಲೀಸ್ ಠಾಣೆಯ ಸಭಾಂಗಣದಲ್ಲಿ ಶನಿವಾರ ನಡೆದ ಬಕ್ರೀದ್ ಹಬ್ಬದ ಪ್ರಯುಕ್ತ, ವಿವಿಧ ಸಮುದಾಯದವರ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

‘ಬಕ್ರೀದ್ ಹಬ್ಬದಲ್ಲಿ ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡಬಾರದು. ಸಮುದಾಯದವರು ಹಬ್ಬ ಆಚರಣೆ ವೇಳೆ, ಪ್ರಾರ್ಥನೆ ಸಲ್ಲಿಸಲು ಬರುವಾಗ ಸಂಚಾರಕ್ಕೆ ತೊಂದರೆಯಾಗದಂತೆ ತೆರಳಬೇಕು. ಇತರ ಸಮುದಾಯದವರೂ ಮುಸ್ಲಿಮರಿಗೆ ತೊಂದರೆಯಾಗದಂತೆ ಸಹಕರಿಸಬೇಕು’ ಎಂದು ಸೂಚಿಸಿದರು.

ADVERTISEMENT

ಸಂಚಾರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಶಿವಕುಮಾರ್ ಮಾತನಾಡಿ, ‘ಪ್ರತಿಯೊಂದು ಸಮುದಾಯದ ಹಬ್ಬಗಳು ಭಾವೈಕ್ಯತೆಯ ಸಂಕೇತ. ಇಂತಹ ಸಂದರ್ಭದಲ್ಲಿ ಯಾವುದೇ ರೀತಿಯ ಕಲಹಕ್ಕೆ ಅವಕಾಶವಿಲ್ಲದಂತೆ ತಮ್ಮ ಸಮುದಾಯದ ಹಬ್ಬಗಳನ್ನು ಆಚರಣೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

ಪೂರ್ವ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಹೇಮಂತ್ ಕುಮಾರ್ ಮಾತನಾಡಿ, ‘ಹಬ್ಬ ಆಚರಣೆ ಮಾಡುವುದು ಸಂತಸದ ಜೊತೆಗೆ ಸಹಬಾಳ್ವೆ ನಡೆಸಲು. ಇಂತಹ ಸಂದರ್ಭದಲ್ಲಿ ಸಾಮರಸ್ಯಕ್ಕೆ ಧಕ್ಕೆಯಾಗದಂತೆ ಎಚ್ಚರವಹಿಸಬೇಕು’ ಎಂದರು.

ಪುರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಚೈತನ್ಯ ಕುಮಾರ್ ಹಾಗೂ ವಿವಿಧ ಸಮುದಾಯಗಳ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.