ADVERTISEMENT

ರಾಮನಗರ: ನಾಳೆ ‘ಮೊಗಳ್ಳಿ ಗಣೇಶ್ ನುಡಿ ನಮನ’ ಕಾರ್ಯಕ್ರಮ‌

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2025, 2:27 IST
Last Updated 16 ಅಕ್ಟೋಬರ್ 2025, 2:27 IST
ಡಾ. ಮೊಗಳ್ಳಿ ಗಣೇಶ್
ಡಾ. ಮೊಗಳ್ಳಿ ಗಣೇಶ್   

ರಾಮನಗರ: ‘ನಮ್ಮವರು’ ತಂಡವು ಖ್ಯಾತ ಸಾಹಿತಿ ಡಾ. ಮೊಗಳ್ಳಿ ಗಣೇಶ್ ಅವರ ನುಡಿ ನಮನ ಕಾರ್ಯಕ್ರಮವನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್‌ ಭವನದಲ್ಲಿ ಅ. 17ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಂಡಿದೆ.

ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಚಿಂತಕ ಡಾ. ಬಂಜಗೆರೆ ಜಯಪ್ರಕಾಶ್ ಅವರು ಚಾಲನೆ ನೀಡಲಿದ್ದಾರೆ.

ಸಾಹಿತಿ ಹಾಗೂ ವಿಮರ್ಶಕ ಡಾ. ನಟರಾಜ ಹುಳಿಯಾರ್ ಮತ್ತು ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕಿ ಡಾ. ಎನ್.ಕೆ. ಲೋಲಾಕ್ಷಿ ಅವರು ಮೊಗಳ್ಳಿ ಅವರ ಸಾಹಿತ್ಯ ಮತ್ತು ಬದುಕಿನ ವಿವಿಧ ಮಗ್ಗುಲುಗಳ ಕುರಿತು ಮಾತನಾಡಲಿದ್ದಾರೆ.

ADVERTISEMENT

ಶೋಭಾ ಮೊಗಳ್ಳಿ ಗಣೇಶ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ದಲಿತಪರ, ರೈತಪರ, ಕನ್ನಡಪರ, ಮಹಿಳಾಪರ, ಜನಪರ ಸಂಘಟನೆಗಳು ಹಾಗೂ ಸಂಘ–ಸಂಸ್ಥೆಗಳು ಕಾರ್ಯಕ್ರಮಕ್ಕೆ ಕೈ ಜೋಡಿಸಿವೆ. ಅಂದು ಮೊಗಳ್ಳಿ ಅವರು ಬರೆದಿರುವ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ಕೂಡ ಇರಲಿದೆ ಎಂದು ನಮ್ಮವರು ತಂಡದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.