ADVERTISEMENT

ಕನಕಪುರ | ಕಾಡಾನೆ ದಾಳಿ: ಬಾಳೆ ತೋಟ ನಾಶ

​ಪ್ರಜಾವಾಣಿ ವಾರ್ತೆ
Published 17 ಜನವರಿ 2024, 6:44 IST
Last Updated 17 ಜನವರಿ 2024, 6:44 IST
ಕನಕಪುರ ತಾಲ್ಲೂಕಿನ ಕಂಚನಹಳ್ಳಿ ಗ್ರಾಮದಲ್ಲಿ ಕಾಡಾನೆಗಳು ಬಾಳೆ ತೋಟ ನಾಶ ಮಾಡಿರುವುದು
ಕನಕಪುರ ತಾಲ್ಲೂಕಿನ ಕಂಚನಹಳ್ಳಿ ಗ್ರಾಮದಲ್ಲಿ ಕಾಡಾನೆಗಳು ಬಾಳೆ ತೋಟ ನಾಶ ಮಾಡಿರುವುದು   

ಕನಕಪುರ: ತಾಲ್ಲೂಕಿನ ಸಾತನೂರು ಹೋಬಳಿ ಕಂಚನಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ಕಾಡಾನೆ ಹಿಂಡು ಬಾಳೆ ತೋಟ ನಾಶಪಡಿಸಿವೆ. 

ಇನ್ನು 15 ದಿನದಲ್ಲಿ ಕಟಾವಿಗೆ ಬಂದಿದ್ದ 500 ಬಾಳೆ ಗಿಡಗಳನ್ನು ಕಾಡಾನೆಗಳು ನಾಶ ಮಾಡಿವೆ. ಸುಮಾರು ₹5 ಲಕ್ಷದಷ್ಟು ನಷ್ಟವಾಗಿದೆ ಎಂದು ತೋಟದ ಮಾಲೀಕ ಮನು ಕುಮಾರ್‌ ತಿಳಿಸಿದ್ದಾರೆ.

ಗ್ರಾಮದಲ್ಲಿ ಐದಾರು ಆನೆಗಳ ಹಿಂಡಿದ್ದು ಎರಡು ಆನೆ ಮಾತ್ರ ತೋಟಕ್ಕೆ ನುಗ್ಗಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರುತ್ತಿಲ್ಲ ಎಂದು ಆರೋಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.