ADVERTISEMENT

ರಾಮನಗರ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಎಂಜಿನಿಯರಿಂಗ್ ವಿದ್ಯಾರ್ಥಿನಿ‌ ಸಾವು

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2021, 7:19 IST
Last Updated 7 ನವೆಂಬರ್ 2021, 7:19 IST
ಅಪಘಾತದಿಂದಾಗಿ ನಜ್ಜುಗುಜ್ಜಾದ ಕಾರು
ಅಪಘಾತದಿಂದಾಗಿ ನಜ್ಜುಗುಜ್ಜಾದ ಕಾರು   

ರಾಮನಗರ: ಮಾಗಡಿ ತಾಲ್ಲೂಕಿನ ಜೋಡುಗಟ್ಟೆ ಗೇಟ್ ಬಳಿ ಭಾನುವಾರ ನಸುಕಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಆಕಾಂಕ್ಷ ಗುಪ್ತ (26) ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

ಬೆಂಗಳೂರಿನ ಬಿಎಂಎಸ್ ಕಾಲೇಜಿನ ವಿದ್ಯಾರ್ಥಿಗಳು ಎರಡು ಕಾರ್‌ಗಳಲ್ಲಿ ಸಾವನದುರ್ಗ ಪ್ರವಾಸಕ್ಕೆ ಬಂದಿದ್ದು, ಮುಂಜಾನೆ 3.30ರ ಸುಮಾರಿಗೆ ಮಾಗಡಿ ಮಾರ್ಗವಾಗಿ ಬೆಂಗಳೂರಿಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಯಿತು.

ಅಪಘಾತದಲ್ಲಿ ಜಮ್ಮು ಮೂಲದ ವಿದ್ಯಾರ್ಥಿನಿ ಆಕಾಂಕ್ಷ ಸ್ಥಳದಲ್ಲಿ ಸಾವನ್ನಪ್ಪಿದರು.

ADVERTISEMENT

ಆಶೀಶ್ ರಾಜಾ, ದಿವ್ಯಾಂಶು, ಆಶುತೋಷ್, ದರ್ಶನ್, ಯಶೋವರ್ಧನ್ ಸಿಂಗ್, ಭವ್ಯಾ ಎಂಬುವರು ಗಾಯಗೊಂಡರು ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.