ರಾಮನಗರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಸೀಮೆಎಣ್ಣೆ ಕುಡಿದು ಆತ್ಯಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಚನ್ನಪಟ್ಟಣ ನಿವಾಸಿ ಶಶಿಕುಮಾರ್ (26) ವಿಷ ಸೇವಿಸಿದವರು. ಸದ್ಯ ಅವರನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಶಿಕುಮಾರ್ ಮೂರು ವರ್ಷದ ಹಿಂದೆ ಶ್ರುತಿ ಎಂಬುವರನ್ನು ಮದುವೆ ಆಗಿದ್ದರು. ಹಣಕಾಸಿನ ವಿಚಾರಕ್ಕೆ ಇಬ್ಬರ ನಡುವೆ ಆಗಾಗ್ಗೆ ಗಲಾಟೆ ನಡೆಯುತಿತ್ತು. ಇಬ್ಬರೂ ಠಾಣೆಯ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆಗಾಗಿ ಪೊಲೀಸರು ಆತನನ್ನು ಅನೇಕ ಬಾರಿ ಠಾಣೆಗೆ ಕರೆಸಿದ್ದರು.
‘ವಿಚಾರಣೆಯ ಸಲುವಾಗಿ ಶಶಿಕುಮಾರ್ ರನ್ನು ಶುಕ್ರವಾರ ಠಾಣೆಗೆ ಕರೆಸಲಾಗಿತ್ತು. ಪೊಲೀಸರು ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದರು. ಈ ಸಂದರ್ಭ ವ್ಯಕ್ತಿಯು ಸೀಮೆಎಣ್ಣೆ ಕುಡಿದು ಆತ್ಮಹತ್ಯೆಗೆ ಯತ್ನಿಸಿದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ರಮೇಶ್ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.