ADVERTISEMENT

ಕುಮಾರಸ್ವಾಮಿ ಮುಂದೆಯೇ  ಅಧಿಕಾರಿಗಳ ವಿರುದ್ಧ ರೈತನ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2022, 14:22 IST
Last Updated 19 ಫೆಬ್ರುವರಿ 2022, 14:22 IST
   

ರಾಮನಗರ: ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ತಗಚಗೆರೆ ಗ್ರಾಮದಲ್ಲಿ‌ ಶನಿವಾರ ನಡೆದ ಗ್ರಾಮ‌ ವಾಸ್ತವ್ಯ ಕಾರ್ಯಕ್ರಮದಲ್ಲಿ ಶಾಸಕ ಎಚ್.ಡಿ. ಕುಮಾರಸ್ವಾಮಿ ಮುಂದೆಯೇ ರೈತರೊಬ್ಬರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ‌ ಜಮೀನಿನ ಖಾತೆ ಮಾಡಿಕೊಡಲು ಅಧಿಕಾರಿಗಳು ಲಕ್ಷ ಲಕ್ಷ ಲಂಚ ಕೇಳುತ್ತಿದ್ದಾರೆ. ಖಾತೆ ಮಾಡಿಕೊಡಲು ಸೂಚಿಸಿ ಎಂದು ಕರ್ಲಹಳ್ಳಿ ಗ್ರಾಮದ ರೈತ ಸಿದ್ದೇಗೌಡ ಅಳಲು ತೋಡಿಕೊಂಡರು‌.‌

ಇದಕ್ಕೆ ಸ್ಪಂದಿಸಿದ ಕುಮಾರಸ್ವಾಮಿ ವಾರದೊಳಗೆ ಅಧಿಕಾರಿಗಳನ್ನು ರೈತನ ಬಳಿಗೆ ಕಳುಹಿಸುವುದಾಗಿ ಭರವಸೆ‌ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.