ADVERTISEMENT

ರಾಮನಗರ: ಅಗರಬತ್ತಿ ಕಾರ್ಖಾನೆಗೆ ಬೆಂಕಿ

​ಪ್ರಜಾವಾಣಿ ವಾರ್ತೆ
Published 29 ಜನವರಿ 2021, 13:42 IST
Last Updated 29 ಜನವರಿ 2021, 13:42 IST
ಅಗರಬತ್ತಿ ಕಾರ್ಖಾನೆ ಹೊತ್ತಿ ಉರಿದಿರುವುದು
ಅಗರಬತ್ತಿ ಕಾರ್ಖಾನೆ ಹೊತ್ತಿ ಉರಿದಿರುವುದು   

ರಾಮನಗರ: ಕಗ್ಗಲೀಪುರ–ಬನ್ನೇರುಘಟ್ಟ ಮುಖ್ಯರಸ್ತೆಯ ಗುಳ್ಳೈಮಲೆ ಗ್ರಾಮದ ಬಳಿ ಇರುವ ಅಗರಬತ್ತಿ ಕಾರ್ಖಾನೆಯಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿದೆ.

ಕಾರ್ಖಾನೆ ಒಳಗೆ ಶಾರ್ಟ್‌ ಸರ್ಕಿಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಒಳಗಿನ ಉತ್ಪನ್ನ ಸಂಪೂರ್ಣ ಸುಟ್ಟು ಕರಕಲಾಗಿದೆ. ನಷ್ಟದ ಅಂದಾಜು ತಿಳಿದುಬಂದಿಲ್ಲ. ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗಿಲ್ಲ. ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸ ಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT