ರಾಮನಗರ: ಮಾಗಡಿ ತಾಲ್ಲೂಕಿನ ಹಲಸಬೆಲೆ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಬಹುತೇಕ ಸುಟ್ಟುಹೋಗಿದೆ. ಮನೆ ಮಾಲೀಕರಿಗೂ ಗಾಯಗಳಾಗಿವೆ.
ಮಧ್ಯಾಹ್ನ 1.30ರ ಸುಮಾರಿಗೆ ಮನೆಗೆ ಬೆಂಕಿ ತಗುಲಿದೆ. ಈ ವೇಳೆ ಮಾಲೀಕ ಚಂದ್ರಶೇಖರ ಆಚಾರ್ ಮನೆಯಲ್ಲೇ ಮಲಗಿದ್ದು, ಬೆಂಕಿ ನೋಡಿ ಅಕ್ಕಪಕ್ಕದವರು ರಕ್ಷಣೆ ಮಾಡಿದರು. ಚಂದ್ರಶೇಖರ ಅವರ ಕಾಲಿಗೆ ಸುಟ್ಟ ಗಾಯಗಳಾಗಿದ್ದು, ಮಾಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಗ್ರಾಮಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.