ಕನಕಪುರ: ಕೇರಳ ರಾಜ್ಯದ ವೈನಾಡಿನಲ್ಲಿ ಮಳೆ ಮತ್ತು ಭೂಕುಸಿತದಿಂದ ನೆಲೆ ಕಳೆದುಕೊಂಡ ಸಂತ್ರಸ್ತರ ನೆರವಿಗಾಗಿ ಕನಕಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಮಂಗಳವಾರ ಆಹಾರ ಮತ್ತು ಅಗತ್ಯ ಸಾಮಗ್ರಿಗಳನ್ನು ಕಳಿಸಿದರು.
ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಶಶಿಧರ್ ನೇತೃತ್ವದಲ್ಲಿ ಆಸ್ಪತ್ರೆಯ ವೈದ್ಯರು ನೌಕರರು ಮತ್ತು ಸಿಬ್ಬಂದಿ ವೈಯಕ್ತಿಕವಾಗಿ ಸಹಾಯ ಮಾಡಿದರು. ವೈನಾಡಿನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜನರ ಸಹಾಯಕ್ಕಾಗಿ ಒಂದು ಸಣ್ಣ ಪ್ರಯತ್ನ ಮಾಡುತ್ತಿದ್ದೇವೆ, ಅಗತ್ಯ ವಸ್ತುಗಳು, ಔಷಧಿಗಳು, ಆಹಾರ ಪದಾರ್ಥಗಳನ್ನು ಕಳಿಸಿ ಕೊಡುತ್ತಿದ್ದೇವೆ ಎಂದು ಡಾ. ಶಶಿಧರ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.