
ಪ್ರಜಾವಾಣಿ ವಾರ್ತೆ
ಸಾಂದರ್ಭಿಕ ಚಿತ್ರ
ರಾಮನಗರ: ತಾಲ್ಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಶುಕ್ರವಾರ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಮಾಡಿದ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.
ಮಧ್ಯಾಹ್ನ ಊಟ ಮಾಡಿದ ಕೆಲವರ ಆರೋಗ್ಯದಲ್ಲಿ ಏರುಪೇರಾಗಿದೆ. ಎಂಟು ಮಕ್ಕಳು ಸೇರಿದಂತೆ 25ಕ್ಕೂ ಹೆಚ್ಚು ಜನರಿಗೆ ಹೊಟ್ಟೆ ನೋವು, ವಾಂತಿ, ಭೇದಿಯಾಗಿದೆ. ಎಲ್ಲರನ್ನೂ ರಾಮನಗರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಲಾಗಿದೆ.
‘ಬೇಸಿಗೆ ಕಾರಣ ಆಹಾರ ಸೇವಿಸಿದ ನಂತರ ವ್ಯತ್ಯಾಸವಾಗಿದೆ. ಹೊಟ್ಟೆ ನೋವು, ವಾಂತಿ ಭೇದಿ ಕಾಣಿಸಿಕೊಂಡ ಕಾರಣ ಆಸ್ಪತ್ರೆ ದಾಖಲಾಗಿದ್ದಾರೆ’ ಎಂದು ಆರ್.ಎಂ.ಒ. ನಾರಾಯಣಸ್ವಾಮಿ ತಿಳಿಸಿದರು. ಎಲ್ಲರಿಗೂ ಚಿಕಿತ್ಸೆ ನೀಡಲಾಗಿದ್ದು, ಅಸ್ವಸ್ಥರಾಗಿರುವ ಮಕ್ಕಳಿಗೂ ಯಾವುದೇ ತೊಂದರೆ ಇಲ್ಲ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.