ADVERTISEMENT

ಇಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

​ಪ್ರಜಾವಾಣಿ ವಾರ್ತೆ
Published 26 ಮೇ 2019, 13:27 IST
Last Updated 26 ಮೇ 2019, 13:27 IST

ಚನ್ನಪಟ್ಟಣ: ಇಲ್ಲಿನ ಹೊಂಗನೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ರಾಜ್ಯ ಕಾರ್ಮಿಕರ ಹಿತರಕ್ಷಣಾ ಸೇವಾ ಸಂಘದ ವತಿಯಿಂದ ಮೇ 27ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ.

ಹೃದಯ, ದಂತ, ಮಧುಮೇಹ, ನರರೋಗ, ಕಿವಿ, ಮೂಗು, ಗಂಟಲು, ಮಕ್ಕಳ ಸಮಸ್ಯೆ ಸಂಬಂಧಿ ವೈದ್ಯರು, ಮೂತ್ರಪಿಂಡ, ಸ್ತ್ರೀರೋಗ ತಜ್ಞರು, ಕಣ್ಣಿನ ಸಮಸ್ಯೆ ತಜ್ಞರು ಶಿಬಿರದಲ್ಲಿ ಭಾಗವಹಿಸಲಿದ್ದಾರೆ.

ಎಲ್ಲ ಸಮಸ್ಯೆಗಳಿಗೂ ಉಚಿತವಾಗಿ ಪರೀಕ್ಷೆ ನಡೆಸಿ ಔಷಧಿ ವಿತರಿಸಲಾಗುವುದು. ಕಣ್ಣಿನ ಸಮಸ್ಯೆ ಇರುವವರಿಗೆ ಕನ್ನಡಕಗಳನ್ನುಉಚಿತವಾಗಿ ವಿತರಿಸಲಾಗುವುದು. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸೇವಾ ಸಂಘದ ಸಂಚಾಲಕ ಸಿ.ರಾಜು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.