
ಪ್ರಜಾವಾಣಿ ವಾರ್ತೆ
ಕನಕಪುರ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೊಡ್ಡಾಲಹಳ್ಳಿ ಡಿ.ಪುಟ್ಟಸ್ವಾಮಿಗೌಡ (93) ವಯೋಸಹಜವಾಗಿ ಭಾನುವಾರ ಬೆಳಗ್ಗೆ ನಿಧನ ಹೊಂದಿದರು.
ಅವರಿಗೆ ಪತ್ನಿ ಹಾಗೂ ಪುತ್ರ ಮತ್ತು ಮೂವರು ಪುತ್ರಿಯರಿದ್ದಾರೆ. ಅವರ ತೋಟದ ಜಮೀನಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಗ್ರೇಡ್-2 ತಹಶೀಲ್ದಾರ್ ಮನೋಹರ್ ನೇತೃತ್ವದಲ್ಲಿ ಗೌರವ ಸಮರ್ಪಣೆ ನೆರವೇರಿತು. ಮೃತರ ಸಹೋದರ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಡಿ.ವಿಜಯದೇವ, ಡಾ.ಡಿ.ನಾಗರಾಜು ಸೇರಿದಂತೆ ಅನೇಕ ಗಣ್ಯರು ಅಂತಿಮ ದರ್ಶನ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.