ADVERTISEMENT

ಪಂಚಾಯಿತಿ ಸಿಬ್ಬಂದಿಯಿಂದ ಶವಸಂಸ್ಕಾರ

​ಪ್ರಜಾವಾಣಿ ವಾರ್ತೆ
Published 13 ಮೇ 2021, 9:11 IST
Last Updated 13 ಮೇ 2021, 9:11 IST
ಕೊಳ್ಳಿಗನಹಳ್ಳಿ ಪಂಚಾಯಿತಿಯಿಂದ ಕೊರೊನಾ ಸೋಂಕಿತನ ಅಂತ್ಯಸಂಸ್ಕಾರ ನೆರವೇರಿಸಲಾಯಿತು
ಕೊಳ್ಳಿಗನಹಳ್ಳಿ ಪಂಚಾಯಿತಿಯಿಂದ ಕೊರೊನಾ ಸೋಂಕಿತನ ಅಂತ್ಯಸಂಸ್ಕಾರ ನೆರವೇರಿಸಲಾಯಿತು   

ಕನಕಪುರ: ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಶವಸಂಸ್ಕಾರ ಮಾಡಲು ಮೃತರ ಕುಟುಂಬಸ್ಥರು ಮುಂದೆ ಬಾರದಿದ್ದರಿಂದ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಸಿಬ್ಬಂದಿಯೇ ಬುಧವಾರ ಅಂತ್ಯಕ್ರಿಯೆ ನೆರವೇರಿಸಿದರು.

ತಾಲ್ಲೂಕಿನ ಹಾರೋಹಳ್ಳಿ ಹೋಬಳಿಯ ಕೊಳ್ಳಿಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾರೇಪಾಳ್ಯದ ವಿನಾಯಕ ನಗರದ ನಾಗರಾಜು (55) ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರವನ್ನು ಪಿಡಿಒ ದೊಡ್ಡರಂಗೇಗೌಡ ಮತ್ತು ಪಂಚಾಯಿತಿ ಸಿಬ್ಬಂದಿ ನೆರವೇರಿಸಿದರು.

ನಾಗರಾಜ್‌ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಂಜೆ ನಿಧನರಾದರು.

ADVERTISEMENT

ಮೃತರ ಮೃತದೇಹವನ್ನು ಗ್ರಾಮಕ್ಕೆ ತಂದಾಗ ಕುಟುಂಬದವರು ಶವಸಂಸ್ಕಾರ ನೆರವೇರಿಸಲು ಮುಂದೆ ಬರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.