ರಾಮನಗರ: ಬೆಂಗಳೂರಿನಲ್ಲಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿರುವ ರಮೇಶ್ ರಾಮನಗರ ತಾಲ್ಲೂಕಿನ ಮೆಳೇಹಳ್ಳಿ ಗ್ರಾಮದವರು. ಸದ್ಯ ಅವರ ಮನೆಯಲ್ಲಿ ನೀರವ ಮೌನ ಆವರಿಸಿದ್ದು, ಸುದ್ದಿ ತಿಳಿಯುತ್ತಲೇ ಅವರ ತಂದೆ ಅಸ್ವಸ್ಥರಾಗಿದ್ದಾರೆ. ರಮೇಶ್ ಕಾಂಗ್ರೆಸ್ ಶಾಸಕ ಜಿ. ಪರಮೇಶ್ವರ ಅವರ ಆಪ್ತ ಸಹಾಯಕರಾಗಿದ್ದರು.
ರಮೇಶ್ ಈ ಮೊದಲು ಕೆಪಿಸಿಸಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದು, ಕೆಲವು ವರ್ಷಗಳಿಂದ ಪರಮೇಶ್ವರ್ ಅವರ ಆಪ್ತ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಗುರುವಾರ ಐ.ಟಿ. ಅಧಿಕಾರಿಗಳು ಪರಮೇಶ್ವರ್ ಮನೆ, ಸಂಸ್ಥೆಗಳ ಮೇಲೆ ದಾಳಿ ನಡೆಸಿದ ಸಂದರ್ಭ ರಮೇಶ್ ಅವರನ್ನೂ ವಿಚಾರಣೆಗೆ ಒಳಪಡಿಸಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ದೂರಿದ್ದಾರೆ.
* ಇವನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.