ADVERTISEMENT

ವಕೀಲರ ಸಂಘದ ಅಧ್ಯಕ್ಷರಾಗಿ ಗಿರೀಶ್ ಆಯ್ಕೆ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2019, 14:32 IST
Last Updated 25 ಆಗಸ್ಟ್ 2019, 14:32 IST
ಚನ್ನಪಟ್ಟಣ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಟಿ.ವಿ.ಗಿರೀಶ್ ಅವರನ್ನು ಅಭಿನಂದಿಸಲಾಯಿತು
ಚನ್ನಪಟ್ಟಣ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಟಿ.ವಿ.ಗಿರೀಶ್ ಅವರನ್ನು ಅಭಿನಂದಿಸಲಾಯಿತು   

ಚನ್ನಪಟ್ಟಣ: ವಕೀಲರ ಸಂಘದ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಟಿ.ವಿ.ಗಿರೀಶ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶಿವರಾಜು ಆಯ್ಕೆಯಾಗಿದ್ದಾರೆ.

ಇಲ್ಲಿನ ನ್ಯಾಯಾಲಯದ ಸಭಾಂಗಣದಲ್ಲಿ ಶನಿವಾರ ನಡೆದ ಅಧ್ಯಕ್ಷ ಸ್ಥಾನದ ಚುನಾವಣೆಗೆ ಗಿರೀಶ್, ಬೋಜೇಗೌಡ ಹಾಗೂ ಜೆ.ಟಿ.ಪ್ರಕಾಶ್ ಸ್ಪರ್ಧಿಸಿದ್ದರು. ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ವಕೀಲರಾದ ಶಿವರಾಜು ಹಾಗೂ ಶ್ರೀಧರ್ ನಾಮಪತ್ರ ಸಲ್ಲಿಸಿದ್ದರು.

ಉಪಾಧ್ಯಕ್ಷರಾಗಿ ಕೆ.ಟಿ.ರವಿ, ಖಜಾಂಚಿಯಾಗಿ ದೇವರಾಜು, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕೃಷ್ಣಪ್ಪ, ವಸಂತಮ್ಮ, ಅಂಬಿಕಾ, ಶಶಿಕುಮಾರ್, ದೇವರಾಜು, ಹನುಮಂತ ಆಯ್ಕೆಯಾದರು.

ADVERTISEMENT

ಚುನಾವಣಾಧಿಕಾರಿಯಾಗಿ ಶಿವರಾಜೇಗೌಡ, ನಾಗರಾಜಯ್ಯ, ಮಂಜು ಕಾರ್ಯ ನಿರ್ವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.