ADVERTISEMENT

ಶಿವಾಲ್ದಪ್ಪನಬೆಟ್ಟ: ಗುರು ಪೂರ್ಣಿಮೆ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 25 ಜುಲೈ 2021, 3:53 IST
Last Updated 25 ಜುಲೈ 2021, 3:53 IST
ಕನಕಪುರ ತಾಲ್ಲೂಕಿನ ಶಿವಾಲ್ದಪ್ಪನ ಬೆಟ್ಟದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಗಣೇಶ ಹೋಮವನ್ನು ನೆರವೇರಿಸಲಾಯಿತು
ಕನಕಪುರ ತಾಲ್ಲೂಕಿನ ಶಿವಾಲ್ದಪ್ಪನ ಬೆಟ್ಟದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಗಣೇಶ ಹೋಮವನ್ನು ನೆರವೇರಿಸಲಾಯಿತು   

ಕನಕಪುರ: ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿ ಶಿವಾಲ್ದಪ್ಪನಬೆಟ್ಟ (ಶಿವಗಿರಿಕ್ಷೇತ್ರ)ದಲ್ಲಿ ಗುರು ಪೂರ್ಣಿಮೆ ಪ್ರಯುಕ್ತವಾಗಿ ಶನಿವಾರ ನಂದಿ ಪೂಜೆ, ಗಣೇಶ ಹೋಮ, ಶಿವಲಿಂಗಕ್ಕೆ ಅಭಿಷೇಕ ನಡೆಸಿ ವಿಶೇಷ ಅಲಂಕಾರದೊಂದಿಗೆ ಪೂಜೆ ನೆರವೇರಿಸಲಾಯಿತು.

ಕ್ಷೇತ್ರದ ಪೀಠಾಧ್ಯಕ್ಷ ಅನ್ನದಾನನಾಥ ಸ್ವಾಮಿ ಸಾನಿಧ್ಯವಹಿಸಿ ಕ್ಷೇತದಲ್ಲಿ ಎಲ್ಲಾ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿಕೊಟ್ಟರು.

ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತರು ಆಗಮಿಸಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರ ಆರಾಧನೆ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.