
ಬಂಧನ (ಸಾಂದರ್ಭಿಕ ಚಿತ್ರ)
ಹಾರೋಹಳ್ಳಿ: ಪತ್ನಿಗೆ ಮಾನಸಿಕ ಕಿರುಕುಳ, ದೈಹಿಕ ಹಿಂಸೆ ನೀಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ವ್ಯಕ್ತಿಯೊಬ್ಬರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಂಟನೇ ಸೆಷನ್ಸ್ ನ್ಯಾಯಾಲಯ 2 ವರ್ಷ 6 ತಿಂಗಳು ಶಿಕ್ಷೆ ಮತ್ತು ₹20 ಸಾವಿರ ದಂಡ ವಿಧಿಸಿ ಆದೇಶಿಸಿದೆ.
ಪತಿ ಕುಮಾರ್ (27) ಎಂಬುವರ ಪತ್ನಿ 2013ರಲ್ಲಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ನಂತರ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆತ್ಮಹತ್ಯಗೆ ಯತ್ನಿಸಿದ ಮಹಿಳೆ ಹೇಳಿಕೆಯನ್ನು ದಾಖಲಿಸಿಕೊಂಡಿದ್ದರು. ನಂತರ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು. ಕಗ್ಗಲೀಪುರ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಸರ್ಕಾರಿ ಅಭಿಯೋಜಕರಾಗಿ ಚಂದ್ರಕಲಾ ವಾದ ಮಂಡಿಸಿದರು. ತನಿಖಾಧಿಕಾರಿ ಪಿಎಸ್ಐ ವಿಶ್ವನಾಥ್, ಸಿಬ್ಬಂದಿ ಸಂದೀಪ್ ಕಾರ್ಯಾಚರಣೆ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.