ADVERTISEMENT

ಕುಮಾರಸ್ವಾಮಿ ಹುಟ್ಟುಹಬ್ಬ: ರಾಮನಗರದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2022, 13:57 IST
Last Updated 16 ಡಿಸೆಂಬರ್ 2022, 13:57 IST
ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ
ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ   

ರಾಮನಗರ: ಎಚ್‌.ಡಿ. ಕುಮಾರಸ್ವಾಮಿ ಅವರ 64ನೇ ಜನ್ಮದಿನದ ಅಂಗವಾಗಿ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ನಡೆದಿದ್ದು, ಸಾವಿರಾರು ಮಂದಿ ಪಾಲ್ಗೊಂಡಿದ್ದಾರೆ.

ತಿರುಪತಿ ದೇವಸ್ಥಾನದ 80 ಅರ್ಚಕರ ನೇತೃತ್ವದಲ್ಲಿ ಕಲ್ಯಾಣೋತ್ಸವ ನಡೆದಿದೆ. ಇದಕ್ಕಾಗಿ ಬೃಹತ್‌ ಆದ ಸೆಟ್‌ ಹಾಕಲಾಗಿದ್ದು, ಅದ್ದೂರಿ ದೀಪಾಲಂಕಾರದ ವ್ಯವಸ್ಥೆ ಮಾಡಲಾಗಿದೆ. ತಿರುಪತಿಯಿಂದ ದೇವರ ವಿಗ್ರಹಗಳನ್ನು ತಂದು ಪ್ರತಿಷ್ಠಾಪಿಸಲಾಗಿದೆ. ಎಚ್‌.ಡಿ. ಕುಮಾರಸ್ವಾಮಿ ಕುಟುಂಬವು ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದೆ.

30 ಸಾವಿರ ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಇದ್ದು, ಹೊರ ಜಿಲ್ಲೆಗಳಿಂದಲೂ ಜನರು ಬಂದಿದ್ದಾರೆ. ಭಕ್ತರಿಗಾಗಿ ತಲಾ 1 ಲಕ್ಷ
ಲಾಡು, ಪುಳಿಯೊಗರೆ ಹಾಗೂ ಸಜ್ಜಿಗೆ ಪ್ರಸಾದದ ಪ್ಯಾಕೆಟ್‌ಗಳ ವ್ಯವಸ್ಥೆ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.