ADVERTISEMENT

ಒಂದೇ ವೇದಿಕೆಯಲ್ಲಿ ಎಚ್‌ಡಿಕೆ, ಡಿಕೆ ಸುರೇಶ್‌, ಸಿಪಿ ಯೋಗೇಶ್ವರ್‌

ಕವಿ ಸಿದ್ಧಲಿಂಗಯ್ಯ ಅವರ ಸ್ಮರಣೆ ಕಾರ್ಯಕ್ರಮದಲ್ಲಿ ಮೂವರು ನಾಯಕರ ಸಮಾಗಮ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2021, 8:27 IST
Last Updated 2 ಸೆಪ್ಟೆಂಬರ್ 2021, 8:27 IST
ಅಕ್ಕಪಕ್ಕ ಕುಳಿತಿರುವ ಎಚ್‌.ಡಿ. ಕುಮಾರಸ್ವಾಮಿ, ಡಿ.ಕೆ. ಸುರೇಶ್ ಹಾಗು ಸಿ.ಪಿ. ಯೋಗೇಶ್ವರ್
ಅಕ್ಕಪಕ್ಕ ಕುಳಿತಿರುವ ಎಚ್‌.ಡಿ. ಕುಮಾರಸ್ವಾಮಿ, ಡಿ.ಕೆ. ಸುರೇಶ್ ಹಾಗು ಸಿ.ಪಿ. ಯೋಗೇಶ್ವರ್   

ರಾಮನಗರ: ಚನ್ನಪಟ್ಟಣದ ಅಂಬೇಡ್ಕರ್ ಭವನದಲ್ಲಿ‌ ಗುರುವಾರ ನಡೆದ ಕವಿ ಸಿದ್ಧಲಿಂಗಯ್ಯ ಅವರ ಸ್ಮರಣೆ ಕಾರ್ಯಕ್ರಮದಲ್ಲಿ ಮೂವರು ರಾಜಕೀಯ ವೈರಿಗಳು ಅಕ್ಕಪಕ್ಕ ಕುಳಿತು ಗಮನ ಸೆಳೆದರು.

ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಸಂಸದ ಡಿ.ಕೆ. ಸುರೇಶ್ ಹಾಗು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೀಗೆ ಒಟ್ಟಾಗಿ ಕುಳಿತಿದ್ದನ್ನು ಕಂಡು ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ‌ ಕಾರ್ಯಕರ್ತರೂ ಆಶ್ಚರ್ಯಗೊಂಡರು. ಆದರೆ ಈ ಮೂವರು ಒಬ್ಬರಿಗೊಬ್ಬರು ಹೆಚ್ಚೇನು ಮಾತನಾಡಲಿಲ್ಲ.

ಜಿಲ್ಲೆಯ‌ ಕಾರ್ಯಕ್ರಮಗಳಲ್ಲಿ ಈ ಮೂವರು ಒಟ್ಟಿಗೆ ಪಾಲ್ಗೊಂಡಿದ್ದು ಅಪರೂಪ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.