ರಾಮನಗರ: ಮಂಗಳವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಪಬ್ಲಿಕ್ ಟಿ.ವಿ. ರಾಮನಗರ ಜಿಲ್ಲಾ ವರದಿಗಾರ ಹನುಮಂತು ಅವರ ಕನಕಪುರ ತಾಲ್ಲೂಕಿನ ಪಡುವಣಗೆರೆ ಮನೆಗೆ ಶಾಸಕ ಎಚ್.ಡಿ. ಕುಮಾರಸ್ವಾಮಿ ಬುಧವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಹನುಮಂತು ಅವರ ಪತ್ನಿ ಶಶಿಕಲಾ ಮತ್ತು ಪೋಷಕರಿಗೆ ಧೈರ್ಯ ತುಂಬಿದ ಅವರು ಮಗಳ ಭವಿಷ್ಯವನ್ನು ಉತ್ತಮವಾಗಿ ರೂಪಿಸುವಂತೆ ಕಿವಿಮಾತು ಹೇಳಿದರು. ಇದೇ ಸಂದರ್ಭ ವೈಯಕ್ತಿಕವಾಗಿ ₹ 5 ಲಕ್ಷ ಮೊತ್ತದ ಚೆಕ್ ಅನ್ನು ವಿತರಿಸಿದರು.
ವಿವಿಧೆಡೆ ಶ್ರದ್ಧಾಂಜಲಿ: ಹನುಮಂತು ಅವರ ನಿಧನಕ್ಕೆ ಸಂತಾಪ ಸೂಚಿಸಿ ಜಿಲ್ಲೆಯ ವಿವಿಧೆಡೆ ಬುಧವಾರ ಶ್ರದ್ಧಾಂಜಲಿ ಸಭೆಗಳು ನಡೆದವು. ರಾಮನಗರದ ಎಪಿಎಂಸಿ ಆವರಣದಲ್ಲಿ ರೈತ ಮುಖಂಡ ಎಂ.ಡಿ. ಶಿವಕುಮಾರ್ ಮತ್ತು ಆಸಕ್ತರು ಶ್ರದ್ಧಾಂಜಲಿ ಸಲ್ಲಿಸಿದರು. ಲೋಕೇಶ್, ಬಸವರಾಜು, ಸಿದ್ಧಲಿಂಗಮೂರ್ತಿ, ರಂಜುಮೌಳಿ, ವಿಶ್ವನಾಥ್ ಇದ್ದರು. ಬಿಜೆಪಿ ಪದಾಧಿಕಾರಿಗಳು ಜಿಲ್ಲಾಸ್ಪತ್ರೆ ಆವರಣದಲ್ಲಿ ನಮನ ಸಲ್ಲಿಸಿದರು. ವಿನೋದ್ ಭಗತ್, ಭರತ್, ಯೋಗಾನಂದ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.