ADVERTISEMENT

ರಾಮನಗರ: ಮಳೆಯ ಅಬ್ಬರ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2021, 4:31 IST
Last Updated 23 ಏಪ್ರಿಲ್ 2021, 4:31 IST
ರಾಮನಗರದಲ್ಲಿ ಗುರುವಾರ ಸಂಜೆ ಮಳೆ ಸುರಿಯಿತು
ರಾಮನಗರದಲ್ಲಿ ಗುರುವಾರ ಸಂಜೆ ಮಳೆ ಸುರಿಯಿತು   

ರಾಮನಗರ: ಜಿಲ್ಲೆಯಾದ್ಯಂತ ಗುರುವಾರ ಸಂಜೆ ಗುಡುಗು ಸಹಿತ ಮಳೆಯಾಯಿತು.

ನಗರದಲ್ಲಿ ಸಂಜೆ 4.30ರ ಸುಮಾರಿಗೆ ಮಳೆ ಆರಂಭಗೊಂಡಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಬಿರುಗಾಳಿ ಸಮೇತ ಸುರಿಯಿತು. ಇದರಿಂದಾಗಿ ವಾತಾವರಣ ತಂಪಾಯಿತು. ನಂತರದಲ್ಲೂ ಮಳೆ ಹನಿಯುತ್ತ ಇತ್ತು.

ಮಾಗಡಿ, ಚನ್ನಪಟ್ಟಣ, ಕನಕಪುರ ಹಾಗೂ ಬಿಡದಿಯಲ್ಲೂ ಅಲ್ಲಲ್ಲಿ ಮಳೆಯಾಗಿದೆ. ಬಿರುಗಾಳಿ ಹೆಚ್ಚಾಗಿರುವ ಕಾರಣಕ್ಕೆ ಮಾವಿನ ಬೆಳೆಗೆ ಹಾನಿಯಾಗಿದ್ದು, ಕಾಯಿಗಳು ನೆಲ ಕಚ್ಚಿವೆ. ಬುಧವಾರ ರಾತ್ರಿಯೂ ರಾಮನಗರದಲ್ಲಿ ಉತ್ತಮ ಮಳೆ ಸುರಿದಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.