ADVERTISEMENT

ಮತ್ತೆ ಮಳೆ: ರಾಮನಗರ ಜಿಲ್ಲೆಯ ಜಲಾಶಯಗಳಿಗೆ  ಜೀವಕಳೆ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2022, 12:46 IST
Last Updated 6 ಸೆಪ್ಟೆಂಬರ್ 2022, 12:46 IST
   

ರಾಮನಗರ: ನಿರಂತರ ಮಳೆಯಿಂದಾಗಿ ಜಿಲ್ಲೆಯ ಜಲಾಶಯಗಳಿಗೆ ಜೀವಕಳೆ ಬಂದಿದೆ.

ತಿಪ್ಪಗೊಂಡನಹಳ್ಳಿ ಜಲಾಶಯ ಭರ್ತಿಯಾಗಿದ್ದು, ಅಲ್ಲಿಂದ ಅರ್ಕಾವತಿ ನದಿಗೆ ನೀರು ಬಿಡಲಾಗಿದೆ. ಪರಿಣಾಮವಾಗಿ ಮಂಚನಬೆಲೆ ಜಲಾಶಯದ ಒಳಹರಿವು ಹೆಚ್ಚಿದ್ದು, 6 ಸಾವಿರ ಕ್ಯುಸೆಕ್ ನಷ್ಟು ನೀರು ನದಿಗೆ ಹರಿದಿದೆ. ಚನ್ನಪಟ್ಟಣ ತಾಲ್ಲೂಕಿನ ಇಗ್ಗಲೂರು ಬ್ಯಾರೇಜ್ ನಿ‌ಂದ ಶಿಂಷಾ ನದಿಗೆ ಹೆಚ್ಚಿ‌ನ ಪ್ರಮಾಣದಲ್ಲಿ ನೀರು ಹರಿದಿದೆ.

ಕಣ್ವ ಜಲಾಶಯದಿಂದ 1200 ಕ್ಯುಸೆಕ್ ನಷ್ಟು ನೀರನ್ನು ನದಿಗೆ ಬಿಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.