ADVERTISEMENT

ಕನಕಪುರ: ವಿದ್ಯುತ್‌ ತಂತಿ ತಗುಲಿಯುವಕ ಸಾವು

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2023, 5:39 IST
Last Updated 4 ಫೆಬ್ರುವರಿ 2023, 5:39 IST
ಮೃತ ಅಭಿಷೇಕ್‌
ಮೃತ ಅಭಿಷೇಕ್‌   

ಕನಕಪುರ: ತಾಲ್ಲೂಕಿನ ಗಡಸಳ್ಳಿ ಗ್ರಾಮದಲ್ಲಿ ಕೆಪಿಟಿಸಿಎಲ್ ವಿದ್ಯುತ್ ತಂತಿಯಿಂದ ವಿದ್ಯುತ್‌ ತಗುಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ.

ವಿದ್ಯುತ್ ಪ್ರವಹಿಸಿ ಸಾವನಪ್ಪಿರುವ ಯುವಕನನ್ನು ಗಡಸಳ್ಳಿ ಗ್ರಾಮದ ಅಭಿಷೇಕ್ (24) ಎಂದು ಗುರುತಿಸಲಾಗಿದೆ.

ಅಭಿಷೇಕ್‌ ಸೋಮವಾರ ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಮನೆಯ ಮೇಲೆ ಹಾದು ಹೋಗಿರುವ 220 ಕೆವಿ ವಿದ್ಯುತ್ ಲೈನ್‌ ತಗುಲಿತ್ತು.

ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರು ಶುಕ್ರವಾರ ನಿಧನರಾಗಿದ್ದಾರೆ.

ಘಟನೆ ಸಂಬಂಧ ಮೃತರ ಕುಟುಂಬದವರು ಕೆಪಿಟಿಸಿಎಲ್ ವಿರುದ್ಧ ದೂರು ನೀಡಿದ್ದಾರೆ. ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.