
ಪ್ರಜಾವಾಣಿ ವಾರ್ತೆ
ಮಾಗಡಿ: ತಾಲ್ಲೂಕಿನ ತಿಪ್ಪಸಂದ್ರ ಹೋಬಳಿಯ ಹೆಬ್ಬಾಳಲು ಗ್ರಾಮದ ಮುಳ್ಕಟ್ಟಮ್ಮ ದೇವಿಗೆ ಗೃಹ ಸಚಿವ ಜಿ.ಪರಮೇಶ್ವರ ಮತ್ತು ಪತ್ನಿ ಕನ್ನಿಕಾ ಪರಮೇಶ್ವರ ದಂಪತಿ ಭಾನುವಾರ ಪೂಜೆ ಸಲ್ಲಿಸಿದರು.
ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನ ಮುಗಿಸಿಕೊಂಡ ನಂತರ ಭಾನುವಾರ ಬೆಳಗ್ಗೆ ಪತ್ನಿ ಸಮೇತ ದೇವಸ್ಥಾನಕ್ಕೆ ಬಂದ ಪರಮೇಶ್ವರ ಮನೆ ದೇವರಿಗೆ ಪೂಜೆ ಸಲ್ಲಿಸಿದರು.
‘ರಾಜಕೀಯ ಒತ್ತಡದ ನಡುವೆ ದೇವಿಗೆ ಪೂಜೆ ಸಲ್ಲಿಸಲು ಆಗಿರಲಿಲ್ಲ. ಈಗ ಅಧಿವೇಶನ ಮುಗಿದಿದ್ದು, ದೇವಿಯ ಆಶೀರ್ವಾದ ಪಡೆದೆ’ ಎಂದು ತಿಳಿಸಿದರು. ಬೆಸ್ಕಾಂ ಮಾಜಿ ನಿರ್ದೇಶಕ ಬಿ.ವಿ. ಜಯರಾಂ ಮತ್ತು ಕಾಂಗ್ರೆಸ್ ಮುಖಂಡರು, ಗ್ರಾಮಸ್ಥರು ಜೊತೆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.