ADVERTISEMENT

ಮೀಸಲು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ, ಮೂವರು ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2019, 13:24 IST
Last Updated 18 ಸೆಪ್ಟೆಂಬರ್ 2019, 13:24 IST
ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿರುವ ಆರೋಪಿಗಳೊಂದಿಗೆ ಅರಣ್ಯಾಧಿಕಾರಿಗಳು
ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿರುವ ಆರೋಪಿಗಳೊಂದಿಗೆ ಅರಣ್ಯಾಧಿಕಾರಿಗಳು   

ಸಾತನೂರು (ಕನಕಪುರ): ಮೀಸಲು ಅರಣ್ಯ ಪ್ರದೇಶದಲ್ಲಿ ಕಡವೆಯನ್ನು ಬೇಟೆಯಾಡಿ ಸಾಗಾಣಿಕೆ ಮಾಡುತ್ತಿದ್ದಾಗ ಆರೋಪಿಗಳನ್ನು ಅರಣ್ಯಾಧಿಕಾರಿಗಳು ತಾಲ್ಲೂಕಿನ ಹರಿಹರ ಬಳಿಯ ಕಾಳಚೆನ್ನಯ್ಯನಕೆರೆಯ ಸಮೀಪದಲ್ಲಿ ಬಂಧಿಸಿದ್ದಾರೆ.

ಬಂಧಿತರನ್ನು ಸಾತನೂರು ಹೋಬಳಿ ಕುರಿಮಂದೆದೊಡ್ಡಿ ಗ್ರಾಮದ ನಾರಾಯಣ (51) ಬಿನ್‌ ಕೊಂಡಯ್ಯ, ಪುಟ್ಟಸ್ವಾಮಿ (48) ಬಿನ್‌ ಚಿಕ್ಕಮೊಗಯ್ಯ, ವೆಂಕಟರಾಮು (45) ಬಿನ್‌ ಹೊನ್ನಯ್ಯ ಎಂದು ಗುರುತಿಸಲಾಗಿದೆ.

ಕಾವೇರಿ ಅಭಯಾರಣ್ಯದ ಬಸವನಬೆಟ್ಟ ಮೀಸಲು ಅರಣ್ಯದ ಸಂಗಮ ವನ್ಯಜೀವಿ ವಲಯದ ಹರಿಹರ ಗಸ್ತಿನಲ್ಲಿ ಹೆಣ್ಣು ಕಡವೆಯನ್ನು ಬೇಟೆಯಾಡಿ ಅದನ್ನು ಸಾಗಾಣಿಕೆ ಮಾಡುತ್ತಿದ್ದಾಗ ಅರಣ್ಯಾಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ADVERTISEMENT

ವಲಯ ಅರಣ್ಯಾಧಿಕಾರಿ ಕಿರಣ್‌ಕುಮಾರ್‌ ಜಿ. ಕರತಂಗಿ, ಉಪ ವಲಯ ಅರಣ್ಯಾಧಿಕಾರಿ ಅನಿಲ್‌ಕುಮಾರ್‌.ಸಿ, ಅರಣ್ಯ ರಕ್ಷಕ ಶರಣಪ್ಪ, ಸಿಬ್ಬಂದಿ ರವಿ, ಕಾರ್ತಿಕ್‌ ರವಿನಾಯ್ಕ್‌, ಸುದೀಪ್‌, ದೇವರಾಜು ದಾಳಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.