ರಾಮನಗರ: ತಾಲ್ಲೂಕಿನ ಅರೇಹಳ್ಳಿ ಗ್ರಾಮದ ತೋಟದಲ್ಲಿ ಇರಿಸಲಾಗಿದ್ದ ಬೋನಿನಲ್ಲಿ ಸೋಮವಾರ ಮುಂಜಾನೆ ಚಿರತೆ ಸೆರೆಯಾಯಿತು.
ಗ್ರಾಮದ ಮರಿಚಿಕ್ಕೇಗೌಡ ಅವರ ಜಮೀನಿನಲ್ಲಿ ಸೆರೆಯಾದ ಐದನೇ ಚಿರತೆ ಇದಾಗಿದೆ. ಜಮೀನಿಗೆ ಹೊಂದಿಕೊಂಡಂತೆ ಅರಣ್ಯ ಪ್ರದೇಶ ಇದ್ದು, ಅಲ್ಲಿಂದ ಚಿರತೆ ಬರುವುದು ಸಾಮಾನ್ಯವಾಗಿದೆ. ಈಚೆಗೆ ಗ್ರಾಮಕ್ಕೆ ರಾತ್ರಿ ವೇಳೆ ಚಿರತೆಗಳು ನುಗ್ಗುತ್ತಿದ್ದು, ಸಾಕಿಪ್ರಾಣಿಗಳನ್ನು ಹೊತ್ತೊಯ್ಯುತ್ತಿದ್ದವು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಬೋನು ಇರಿಸಿತ್ತು.
ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು, ಬೋನನ್ನು ಸ್ಥಳಾಂತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.