ಬಿಡದಿ: ಬಾನಂದೂರು–ಬಿಡದಿ ಮಧ್ಯೆ ಹಾದುಹೋಗುವ ಬಸವರಾಜಪ್ಪ ಅವರ ಜಮೀನಿನ ಬಳಿ ಇರುವ ತೊರೆನೆಲ್ಲಿಗುಡ್ಡೆ ಕೆರೆಯ ಕೋಡಿ ಹರಿದಿರುವುದರಿಂದ ರಸ್ತೆ ಕುಸಿದಿದೆ. ಇದರಿಂದ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.
ಈ ಮಾರ್ಗದಲ್ಲಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಜೊತೆಗೆ ಬಾಲಗಂಗಾಧರನಾಥ ಸ್ವಾಮೀಜಿ ಅವರ ಜನ್ಮ ಸ್ಥಳವಾಗಿರುವುದರಿಂದ ಜನರು ಇಲ್ಲಿಗೆ ಭೇಟಿ ನೀಡುತ್ತಿರುತ್ತಾರೆ. ರಸ್ತೆಯಲ್ಲಿ ಗುಂಡಿ ಬಿದ್ದಿರುವುದರಿಂದ ಅಪಘಾತಗಳ ಸಂಖ್ಯೆ
ಹೆಚ್ಚುತ್ತಿದೆ.
‘ಕೂಡಲೇ ಸ್ಥಳೀಯ ಶಾಸಕರು, ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ದುರಸ್ತಿಗೆ ಕ್ರಮವಹಿಸಬೇಕು’ ಎಂದು ಬಾನಂದೂರು ಗ್ರಾಮಸ್ಥ ಬಿ.ಎಂ. ಸತೀಶ್ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.